Select Your Language

Notifications

webdunia
webdunia
webdunia
webdunia

ಸಿಎಂ ಕುಟುಂಬದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡಿದ ಸಿದ್ದರಾಮಯ್ಯ...

ಸಿಎಂ ಕುಟುಂಬದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡಿದ ಸಿದ್ದರಾಮಯ್ಯ...
ಹುಬ್ಬಳ್ಳಿ , ಶುಕ್ರವಾರ, 17 ಮೇ 2019 (13:07 IST)
ದೇಶದಲ್ಲಿ ಕಾಂಗ್ರೆಸ್ ಹುಟ್ಟಿದ್ದು ಸ್ವತಂತ್ರ ಹೋರಾಟಕ್ಕೆ, ರಾಜಕೀಯ ಮಾಡಲು ಅಲ್ಲ. ಕಾಂಗ್ರೆಸ್ ವಿಸರ್ಜನೆ ಮಾಡಬೇಕು ಎಂದು ಗಾಂಧೀಜಿ ಹೇಳಿದ್ದರು. ಆದ್ರೆ ಕಾಂಗ್ರೆಸ್‌ ನ ಕಳ್ಳಕಾಕರೆಲ್ಲ ಸೇರಿಕೊಂಡು ಕಾಂಗ್ರೆಸ್ ಪಕ್ಷ ಮಾಡಿದ್ದಾರೆ. ಹೀಗಂತ ಬಿಜೆಪಿ ಮುಖಂಡ ದೂರಿದ್ದಾರೆ.

ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ‌ ಮಹಿಳಾ‌ ಸಮಾವೇಶದಲ್ಲಿ ಮಾಜಿ ಸಚಿವ ಗೋವಿಂದ ಕಾರಜೋಳ ಮಾತನಾಡಿ, ನರೇಂದ್ರ ಮೋದಿ ಅವಧಿಯಲ್ಲಿ ಭಾರತದೇಶ ಕಾಂಗ್ರೆಸ್ ಮುಕ್ತವಾಗಲಿದೆ ಎಂದರು.

ರಾಜ್ಯದಲ್ಲಿರುವುದು ಅನೈತಿಕ ಮೈತ್ರಿ ಸರ್ಕಾರ ಎಂದರು. ಹೆಚ್.ಡಿ. ರೇವಣ್ಣ ಮುಖ್ಯಮಂತ್ರಿ ಆಗಬೇಕು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಆ ಮೂಲಕ ಅಣ್ಣ ತಮ್ಮಂದಿರ ಮಧ್ಯೆ ಬೆಂಕಿ‌ಹಚ್ಚುವ ಕೆಲಸವನ್ನು ಸಿದ್ದರಾಮಯ್ಯ ಮಾಡಿದ್ದಾರೆ ಎಂದು ಟೀಕೆ ಮಾಡಿದ್ರು.

ಚುನಾವಣೆ ಬಂದಾಗಲೆಲ್ಲ ದಲಿತರು ಮುಖ್ಯಮಂತ್ರಿ ಆಗಬೇಕು ಎಂದು ಭಾಷಣ ಮಾಡ್ತಾರೆ. ಡಾ. ಅಂಬೇಡ್ಕರ್, ಬಾಬು ಜಗಜೀವನ್‌ರಾಮ್ ಅವರನ್ನು ಹೀನಾಯವಾಗಿ ಸೋಲಿಸಿದ್ದು ಕಾಂಗ್ರೆಸ್ ಎಂದು ಜರಿದರು. ನಿಜವಾದ ಕೋಮುವಾದಿಗಳು ಕಾಂಗ್ರೆಸ್‌ನವರು.

ಜಾತಿ-ಜಾತಿಗಳ ಮಧ್ಯೆ, ಧರ್ಮ ಧರ್ಮಗಳ ಮಧ್ಯೆ ಜಗಳ ಹಚ್ಚಿ‌ ರಾಜಕೀಯ ಮಾಡಿದ್ದು ಕಾಂಗ್ರೆಸ್ ಎಂದರು.
ನಿಮ್ಮ ಪ್ರತಿಯೊಂದು ಮತ‌ ಕುಂದಗೋಳದಲ್ಲಿ ಎಸ್.ಐ. ಚಿಕ್ಕನಗೌಡ್ರರನ್ನು ಶಾಸಕರನ್ನಾಗಿ ಮಾಡುತ್ತೆ.
ಯಡಿಯೂರಪ್ಪನವರನ್ನು ಮತ್ತೊಮ್ಮೆ ಮುಖ್ಯಮಂತ್ರಿಯನ್ನಾಗಿ ಮಾಡುತ್ತೆ ಎಂದ್ರು.



 

Share this Story:

Follow Webdunia kannada

ಮುಂದಿನ ಸುದ್ದಿ

ಚಿಂತಾಮಣಿ ವಿಷ ಪ್ರಸಾದ ಸೇವನೆ ಪ್ರಕರಣ ಎಲ್ಲಿಗೆ ಬಂತು?