ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಪ್ರಶ್ನೆ

Webdunia
ಶನಿವಾರ, 6 ಮೇ 2023 (18:30 IST)
ಭ್ರಷ್ಟಾಚಾರದ ಆರೋಪ ಇದ್ರೆ ದಾಖಲಾತಿ ಕೊಡಿ ಅಂತ ಸಿಎಂ ಬಸವರಾಜ್​ ಬೊಮ್ಮಾಯಿ ಹೇಳ್ತಾರೆ.. ಆದ್ರೆ ರೂಪ್ಸಾ, ಕಂಟ್ರಾಕ್ಟರ್ ಅಸೋಸಿಯೇಷನ್‌ನವ್ರು ಬರೆದಿರುವ ಪತ್ರಗಳು ದಾಖಲೆಗಳಲ್ವಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.. ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, PSI ನೇಮಕಾತಿಯಲ್ಲಾದ ಹಗರಣ ದಾಖಲೆಯಾಗಿಲ್ವಾ? 40 ಪರ್ಸೆಂಟ್​​ ಕಮಿಷನ್​​​ಗಾಗಿ ಒಬ್ಬ ಆತ್ಮಹತ್ಯೆ ಮಾಡಿಕೊಂಡ್ರು. ಮಾಜಿ ಸಚಿವ K.S. ಈಶ್ವರಪ್ಪ ರಾಜೀನಾಮೆ ಕೊಟ್ರು. ನಾವು ವಿಧಾನಸೌಧದಲ್ಲಿ ಧರಣಿ ಮಾಡಿದ್ವಿ. ಇದು ಎವಿಡೆನ್ಸ್ ಅಲ್ವಾ ಎಂದು ಸಿದ್ದು ಪ್ರಶ್ನಿಸಿದ್ದಾರೆ..
ಶಾಸಕ ಮಾಡಾಳ್​ ವಿರೂಪಾಕ್ಷಪ್ಪ ಮಗ ಪ್ರಶಾಂತ್​ ಮಾಡಾಳ್​​ ಅವರನ್ನು ಪೊಲೀಸ್‌ನವ್ರು ರೆಡ್‌ಹ್ಯಾಂಡಾಗಿ ಹಿಡಿದಿದ್ರು. ಎಂಟು ಕೋಟಿ ಹಣ ಸಿಕ್ತು.. ಇದಕ್ಕಿಂತ ಎವಿಡೆನ್ಸ್ ಇನ್ನೇನು ಬೇಕು ಎಂದು ಸಿದ್ದು ಕುಟುಕಿದ್ದಾರೆ. ಭ್ರಷ್ಟಾಚಾರ ನಡೆಯುತ್ತಿದೆ ಅನ್ನೋದಕ್ಕೆ ಇದಕ್ಕಿಂತ ಹೆಚ್ಚಿನ ಎವಿಡೆನ್ಸ್ ಏನು ಬೇಕು. ಕರ್ನಾಟಕ ಇತಿಹಾಸದಲ್ಲಿ ಇಂತಹ ಭ್ರಷ್ಟಾಚಾರ ನಡೆದಿಲ್ಲ.ಬರೀ ಇಷ್ಟೇ ಅಲ್ಲ ಬೇರೆ-ಬೇರೆ ಕ್ಷೇತ್ರದಲ್ಲೂ ಲಂಚ ನಡೆಯುತ್ತಿದೆ. ವರ್ಗಾವಣೆ ಸೇರಿದಂತೆ ಹಲವು ಕಡೆ ಲಂಚ ನಡೆಯುತ್ತಿದೆ ಎಂದು ಆರೋಪಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇಕೆದಾಟು ಅಣೆಕಟ್ಟು ಪ್ರಸ್ತಾಪವನ್ನು ತಿರಸ್ಕರಿಸುವಂತೆ ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಪತ್ರ

ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕಕ್ಕೆ ಸಿಹಿಸುದ್ದಿ: ಡಿಕೆ ಶಿವಕುಮಾರ್

ರೈಲು ಪ್ರಯಾಣ ವೇಳೆ ಆಹಾರ ಖರೀದಿಸಿ ತಿನ್ನುವ ಮೊದಲು ಈ ವಿಡಿಯೋ ತಪ್ಪದೇ ನೋಡಿ

ಒಡಿಶಾದಲ್ಲಿ ಸೆಪ್ಟಿಕ್ ಟ್ಯಾಂಕ್ ಒಳಗೆ ಬಿದ್ದ ಬಿಲ್ಡರ್ಸ್‌, 6 ಮಂದಿ ಸಾವು

ಕಾಕ್ರೋಚ್‌ ಜನತಾ ಪಾರ್ಟಿಯ ಎಕ್ಸ್ ಖಾತೆಗೆ ನಿರ್ಬಂಧ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಅಭಿಜಿತ್ ದೀಪ್ಕೆ

ಮುಂದಿನ ಸುದ್ದಿ
Show comments