ಸಿದ್ದರಾಮಯ್ಯರದ್ದು ಸ್ವಾರ್ಥ ರಾಜಕಾರಣ

Webdunia
ಶುಕ್ರವಾರ, 5 ಜೂನ್ 2020 (16:18 IST)
ಸಿದ್ದರಾಮಯ್ಯನವರ ಸ್ವಾರ್ಥ ರಾಜಕಾರಣದಿಂದ ಮತ್ತು ಕಾಂಗ್ರೆಸ್ ಮೋಸ ಮಾಡಿದ್ದರಿಂದಲೇ ನಾವು ಪಕ್ಷ ಬಿಟ್ಟಿದ್ದು ಎಂದು ಬಿಜೆಪಿ ಸಚಿವರೊಬ್ಬರು ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಸರಿಯಾಗಿ ಆಡಳಿತ ನಿರ್ವಹಣೆ ಮಾಡದಿದ್ದರಿಂದಲೇ ಅಂತಹ ಸನ್ನಿವೇಶ ಸೃಷ್ಟಿಯಾಯಿತು. ರಾಜ್ಯದಲ್ಲಿ ಈ ಹಿಂದೆ ಸಿದ್ದರಾಮಯ್ಯ ಸಿಎಂ ಇದ್ದಾಗಲೂ ರಾಕೇಶ್ ಸೂಪರ್ ಸಿಎಂ ಆಗಿದ್ದರು. ಕೆಂಪಯ್ಯ ಗೃಹಸಚಿವ ಎಂಬ ಮಾತುಗಳಿದ್ದವು. ಈಗಲೂ ಸಹ ಅದೇ ರೀತಿಯಾಗಿ ಸಿಎಂ ಬಿ.ಎಸ್.  ಯಡಿಯೂರಪ್ಪ ಬಗ್ಗೆ ಆರೋಪಿಸಲಾಗುತ್ತಿದೆ. ಆಪಾದನೆಯಲ್ಲಿ ಯಾವುದೇ ಹುರುಳಿಲ್ಲ. ಇದೊಂದು ನಿರಾಧಾರ ಆರೋಪ. ರಾಜಕೀಯ ಕಾರಣಕ್ಕಾಗಿ ಸಿದ್ದರಾಮಯ್ಯ ಆರೋಪಿಸುತ್ತಿದ್ದಾರೆಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಚುನಾವಣೆ ಸಮಯದಲ್ಲಿ ನಮ್ಮ ಗೆಲುವಿಗಾಗಿ ಕುಟುಂಬ ಸದಸ್ಯರೆಲ್ಲರೂ ದುಡಿದಿರುತ್ತಾರೆ. ಹೀಗಾಗಿ ಕೆಲವೊಂದು ಸಲಹೆ, ಸೂಚನೆ ಕೊಡುತ್ತಾರೆ. ಹಾಗೆಂದ ಮಾತ್ರಕ್ಕೆ ಅವರೇ ನಮ್ಮ ಪರವಾಗಿ ಆಡಳಿತ ನಡೆಸುತ್ತಿದ್ದಾರೆಂದು ಹೇಳುವುದು ಸರಿಯಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರೂ ಬೇಕಾದರೂ ಸಲಹೆ ನೀಡಬಹುದು. ಅದನ್ನು ಸ್ವೀಕಾರ ಮಾಡಬಹುದು ಅಥವಾ ಬಿಡುವ ಅಧಿಕಾರ ಜನಪ್ರತಿನಿಧಿಗಳಿಗೆ ಇದೆ.

ಆರ್.ಶಂಕರ್, ಎಂಟಿಬಿ ನಾಗರಾಜ, ವಿಶ್ವನಾಥ ತ್ಯಾಗ ಮಾಡಿದ್ದರಿಂದಲೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಅವರಿಗೆ ಸಿಎಂ ಬಿಎಸ್ವೈ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾರೆ. ಎಂಟಿಬಿಯವರಿಗೆ ಬಚ್ಚೇಗೌಡ ಕುಟುಂಬದಿಂದ ಅನ್ಯಾಯ ಆಗಿರುವುದು ನಿಜ. ಚುನಾವಣೆಯಲ್ಲಿ ಶರತ್ ಬಚ್ಚೇಗೌಡ ಸ್ಪರ್ಧೆ ಮಾಡದಂತೆ ಪಕ್ಷ ಸೂಚಿಸಿದರೂ ಸ್ಪರ್ಧೆ ಮಾಡಿದ್ದರಿಂದ ನಾಗರಾಜ ಸೋಲಬೇಕಾಯಿತು. ಯಡಿಯೂರಪ್ಪ ಅದನ್ನು ಸರಿಪಡಿಸುತ್ತಾರೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಸಾವು

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾಗೆ ಅಗ್ನಿ‍ಪರೀಕ್ಷೆ: ಅವಿಶ್ವಾಸ ನಿರ್ಣಯದ ಚರ್ಚೆಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments