Webdunia - Bharat's app for daily news and videos

Install App

'ಸಿದ್ದರಾಮಯ್ಯ ಸ್ಥಿತಿ ಅತಂತ್ರ; ಕಾಂಗ್ರೆಸ್ ಛಿದ್ರ'

Webdunia
ಗುರುವಾರ, 20 ಜೂನ್ 2019 (14:34 IST)
ಮಾಜಿ ಸಿಎಂ ಸಿದ್ದರಾಮಯ್ಯ ಸ್ಥಿತಿ ಇಂದು ಅತಂತ್ರವಾಗಿದೆ. ಕಾಂಗ್ರೆಸ್ ಒಡೆದು ಛಿದ್ರವಾಗುತ್ತಿದೆ. ಹೀಗಂತ ಮಾಜಿ ಡಿಸಿಎಂ ಆರೋಪ ಮಾಡಿದ್ದಾರೆ.  

ಮಲ್ಲೇಶ್ವರಂದ ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾಜಿ ಡಿಸಿಎಂ ಆರ್. ಅಶೋಕ್ ಹೇಳಿಕೆ ನೀಡಿದ್ದು, ಕಾಂಗ್ರೆಸ್ ನಲ್ಲಿ ಯಾರೂ ಸಿದ್ದರಾಮಯ್ಯ ಅವ್ರಿಗೆ ಬೆಲೆ ಕೊಡದಂತಾಗಿದೆ. ಕಾಂಗ್ರೆಸ್ ನಾಯಕರು ಗುಂಪುಗಾರಿಕೆ ಮಾಡಿಕೊಂಡು ಹೊಡೆದಾಡ್ತಿದ್ದಾರೆ. ಇಡೀ ದೇಶದಲ್ಲಿ ಕಾಂಗ್ರೆಸ್ ಮಣ್ಣುಮುಕ್ಕಿದೆ ಎಂದರು.

ರಾಜ್ಯದಲ್ಲಿ ಮೈತ್ರಿ ಮಾಡ್ಕೊಂಡು ಹಾಳಾಗಿ ಹೋಗಿದೆ. ಹೊಸ ಸಚಿವರಿಗೆ ಖಾತೆ ಕೊಡದೇ ಖ್ಯಾತೆ ಮಾಡ್ತಿದ್ದಾರೆ ಎಂದರು.
ಕಾಂಗ್ರೆಸ್ ಶಾಸಕ ರೋಷನ್ ಬೇಗ್ ಅಮಾನತು ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಜೆಡಿಎಸ್ ಸಹವಾಸ ಮಾಡಿ ಕಾಂಗ್ರೆಸ್ ಧೂಳಿಪಟ ಆಗಿದೆ. ಯಾವಾಗಲೂ ಸಿದ್ದರಾಮಯ್ಯ ಮೋದಿ, ಯಡಿಯೂರಪ್ಪ ಅವರಿಗೆ ಏಕವಚನ ಪ್ರಯೋಗ ಮಾಡ್ತಿದ್ದರು.

ಈಗ ಅವರದೇ ಪಕ್ಷದ ಶಾಸಕ ಸಿದ್ದರಾಮಯ್ಯ ಅವರನ್ನು ಏಕವಚನದಲ್ಲಿ ಕರೆಯುವ ಸ್ಥಿತಿ ತಲುಪಿದೆ. ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಸ್ಥಿತಿ ಅತಂತ್ರ ಆಗಿದೆ. ಕಾಂಗ್ರೆಸ್ ನಲ್ಲಿ ಗುಂಪುಗಾರಿಕೆ ಆರಂಭವಾಗಿದೆ. ಕಾಂಗ್ರೆಸ್ ಒಡೆದು ಮಣ್ಣುಪಾಲಾಗುವುದು ಖಚಿತ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tiger viral video: ಹೆಬ್ಬಾವನ್ನೇ ತಿನ್ನಲು ಹೋದ ಹುಲಿ ಸಂಕಟ ಹೇಳತೀರದು

CET exam Brahmin student ಜನಿವಾರ ತೆಗೆಸಿದ ಘಟನೆ: ಕ್ಷಮೆ, ಅಧಿಕಾರಿ ಸಸ್ಪೆಂಡ್ ಓಕೆ, ವಿದ್ಯಾರ್ಥಿಯ ಭವಿಷ್ಯದ ಕತೆಯೇನು

Karnataka caste census: ಜಾತಿಗಣತಿ ವರದಿಯಿಂದ ಹೀಗಾಗಿದೆ ಸಾರ್ ಎಂದು ರಾಹುಲ್ ಗಾಂಧಿಗೆ ವರದಿ ಒಪ್ಪಿಸಲು ತಯಾರಿ

Gold price today: ಚಿನ್ನದ ಬೆಲೆ ಇಂದು ಎಷ್ಟಾಗಿದೆ ನೋಡಿ

Karnataka caste census: ದೇಶದ ಪ್ರಮುಖ ನಾಯಕರ ಜಾತಿ, ಸಮುದಾಯ ಯಾವುದು ಇಲ್ಲಿದೆ ವಿವರ

ಮುಂದಿನ ಸುದ್ದಿ