Publish Date: Mon, 20 Mar 2023 (17:30 IST)
Updated Date: Mon, 20 Mar 2023 (17:32 IST)
ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್ ಜೋಡೊ ಯಾತ್ರೆಯ ಯಶಸ್ಸು ಆಡಳಿತಾರೂಢ BJP ನಿದ್ದೆಗೆಡಿಸಿದೆ ಎಂದು ವಿಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಲೈಂಗಿಕ ದೌರ್ಜನ್ಯದ ಕುರಿತಾಗಿ ಮಹಿಳೆಯರ ಹೇಳಿಕೆಯ ಬಗ್ಗೆ ಮಾಹಿತಿ ಸಂಗ್ರಹ ಮಾಡಲು ರಾಹುಲ್ ಗಾಂಧಿ ನಿವಾಸಕ್ಕೆ ಪೊಲೀಸರು ತೆರಳಿರುವ ವಿಚಾರವಾಗಿ BJP ಹಾಗೂ ಕಾಂಗ್ರೆಸ್ ನಡುವೆ ವಾಗ್ದಾಳಿ ನಡೆಯುತ್ತಿರುವ ಬೆನ್ನಲ್ಲೇ ಸಿದ್ದರಾಮಯ್ಯ ಟ್ವೀಟ್ ಮಾಡಿ ರಾಹುಲ್ ಪರವಾಗಿ ಧ್ವನಿ ಎತ್ತಿದ್ದಾರೆ. ಮಹಿಳಾ ಪೀಡಕರ ಕೂಟಕ್ಕೆ ಮಹಿಳಾ ರಕ್ಷಕರೇ ಅಪರಾಧಿಗಳಾಗಿ ಕಾಣುತ್ತಾರೆ ಎನ್ನುವುದಕ್ಕೆ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರಿಗೆ ನರೇಂದ್ರ ಮೋದಿ ಸರ್ಕಾರ ಪೊಲೀಸರ ಮೂಲಕ ನೀಡುತ್ತಿರುವ ಕಿರುಕುಳವೇ ಸಾಕ್ಷಿ ಎಂದು ಕಿಡಿಕಾರಿದ್ದಾರೆ. ಭಾರತ್ ಜೋಡೊ ಯಾತ್ರೆಯ ಯಶಸ್ಸು ಆಡಳಿತಾರೂಢ BJP ಪಕ್ಷದ ನಿದ್ದೆಗೆಡಿಸಿದೆ. ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರ ಜನಪ್ರಿಯತೆ ಅವರಲ್ಲಿ ಅಸೂಯೆ ಹುಟ್ಟಿಸಿದೆ. ಇವರಿಗೆಲ್ಲ ನನ್ನ ಸಂತಾಪಗಳು. ರಾಹುಲ್ ಗಾಂಧಿಯವರ ಹೋರಾಟ ನಿಲ್ಲದು, ಇಡೀ ದೇಶ ಅವರ ಜೊತೆಗಿದೆ ಎಂದಿದ್ದಾರೆ.