ಶಿಗ್ಗಾಂವಿಗೆ ಯಾಸಿರ್ ಅಹ್ಮದ್ ಖಾನ್ ಪಠಾಣ್ ನಮ್ಮ ಕ್ಯಾಂಡಿಡೇಟ್ ಎಂದ‌ ಸಿದ್ದರಾಮಯ್ಯ

Sampriya
ಗುರುವಾರ, 24 ಅಕ್ಟೋಬರ್ 2024 (19:16 IST)
Photo Courtesy X
ಬೆಂಗಳೂರು: ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪಕ್ಷದ ವರಿಷ್ಠರು ಆಯ್ಕೆ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

ಚನ್ನಪಟ್ಟಣ ಕ್ಷೇತ್ರಕ್ಕೆ ನಿಖಿಲ್ ಕುಮಾರಸ್ವಾಮಿಯವರನ್ನು  ಜೆಡಿಎಸ್ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ,  ಚನ್ನಪಟ್ಟಣ ಕ್ಷೇತ್ರಕ್ಕೆ ಬಿಜೆಪಿ ಅಥವಾ ಜೆಡಿಎಸ್ ನವರು ಯಾರನ್ನು ಅಭ್ಯರ್ಥಿಯಾಗಿ ಕಣಕ್ಕೆ ಇಳಿಸುತ್ತಾರೆಂಬುದು ನಮಗೆ ಮುಖ್ಯವಲ್ಲ. ನಮ್ಮ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ ಅವರು ಚನಪಟ್ಟಣ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ
ವ್ಯಕ್ತಪಡಿಸಿದರು.

ಹಾನಗಲ್​ ತಾಲೂಕಿನ ಬೊಮ್ಮನಳ್ಳಿ ಗ್ರಾಮದವರಾದ ಯಾಸೀರ್​ ಅಹ್ಮದ್​ ಖಾನ್​ ಪಠಾಣ್ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯ ಬಸವರಾಜ್ ಬೊಮ್ಮಾಯಿ ವಿರುದ್ಧ ಸೋಲುಕಂಡಿದ್ದರು. ಇದೀಗ ಉಪಚುನಾವಣೆಗೂ ಸಹ ಕಾಂಗ್ರೆಸ್​, ಹೈಕಮಾಂಡ್ ಯಾಸೀರ್​ ಅಹ್ಮದ್​ ಖಾನ್​ ಪಠಾಣ್ ಅವರನ್ನೇ ಕಣಕ್ಕಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆ ದೇವಸ್ಥಾನದ ಚಿನ್ನ ಕಳವು: ಕೇರಳ ಹೈಕೋರ್ಟ್‌ನಿಂದ ಮಹತ್ವದ ಸೂಚನೆ

ಸಮೀಕ್ಷೆಯಿಂದಾಗಿ ಮಕ್ಕಳ ಕಲಿಕೆಗೆ ಭಾರೀ ಪೆಟ್ಟು: ವಿಜಯೇಂದ್ರ ಆಕ್ರೋಶ

ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆಗೆ ಶರಣಾದ ತಾಯಿ, ಪತಿಯ ಈ ಬೆದರಿಕೆಯೇ ಕಾರಣವಾಯಿತೇ

2013ರಿಂದ 2023ರ ನಡುವೆ ದಲಿತರ ಮೇಲಿನ ಅಪರಾಧ ಹೆಚ್ಚಳ: ಮಲ್ಲಿಕಾರ್ಜುನ ಖರ್ಗೆ

ಅಶ್ರಫ್ ಕೊಲೆ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗಿದ್ದ ಆರೋಪಿ ಭರತ್‌ಗೆ ಬಿಗ್ ಶಾಕ್

ಮುಂದಿನ ಸುದ್ದಿ
Show comments