ಬರ ಪರಿಹಾರ ನೀಡದೆ ಸುಳ್ಳು ಹೇಳಿದ ಅಮಿತ್ ಶಾ: ಸಿದ್ದರಾಮಯ್ಯ

Krishnaveni K
ಬುಧವಾರ, 3 ಏಪ್ರಿಲ್ 2024 (15:22 IST)
ಮೈಸೂರು: ರಾಜ್ಯದ ಜನ ಬರಗಾಲದಿಂದ ತತ್ತರಿಸಿದ್ದರೂ ಸ್ಪಂದಿಸದ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
 
ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಬರ ಘೋಷಣೆ ಆದ ಬಳಿಕ ನಾವು ಸೆಪ್ಟೆಂಬರ್ 23ರಂದೇ ಕೇಂದ್ರಕ್ಕೆ ಮೊದಲ ಮನವಿ ಮಾಡಿದ್ದೇವೆ. ಅಕ್ಟೋಬರ್ ನಲ್ಲಿ ಕೇಂದ್ರ ತಂಡ ರಾಜ್ಯ ಪ್ರವಾಸ ಮಾಡಿ ಬರ ಕುರಿತಂತೆ ವರದಿ ನೀಡಿದೆ. ಈ ತಿಂಗಳಲ್ಲಿಯೇ ಮೂರು ಮನವಿಗಳನ್ನು ಸಲ್ಲಿಸಿದ್ದೇವೆ. ನಂತರ ಡಿಸೆಂಬರ್ 19ರಂದು ನಾನು ಖುದ್ದು ಪ್ರಧಾನ ಮಂತ್ರಿಗಳನ್ನು ಹಾಗೂ 20ರಂದು ಅಮಿತ್ ಶಾ ಅವರನ್ನು ಭೇಟಿಯಾಗಿ, ರಾಜ್ಯದ ಬರ ಪರಿಸ್ಥಿತಿಯ ವಸ್ತುಸ್ಥಿತಿಯನ್ನು ತಿಳಿಸಿದ್ದೇನೆ. ಡಿಸೆಂಬರ್  23ಕ್ಕೆ  ಉನ್ನತ ಮಟ್ಟದ ಸಮಿತಿ ಸಭೆ ನಡೆಸುವುದಾಗಿ ಅಮಿತ್ ಶಾ ಅವರು ತಿಳಿಸಿದ್ದರು. ಮನವಿ ಸಲ್ಲಿಸಿ ಐದು ತಿಂಗಳು ಕಳೆದಿದ್ದರೂ ಅವತ್ತಿಂದ, ಇವತ್ತಿನವರೆಗೂ ಕೇಂದ್ರ ಸರ್ಕಾರ ರಾಜ್ಯಕ್ಕೆ  ಬರ ಪರಿಹಾರವನ್ನು ನೀಡದ ಇವರಿಗೆ ಯಾವ ನೈತಿಕತೆ ಇದೆ. ದೇಶದ ಗೃಹ ಸಚಿವರಾದ ಅಮಿತ್  ಶಾ ಸತ್ಯವನ್ನೂ ನಾಚಿಸುವಂತೆ ಅಪ್ಪಟ ಸುಳ್ಳು ಹೇಳಿದ್ದಾರೆ. ಈ ಎಲ್ಲ ಅಂಶಗಳನ್ನು ಸೂಕ್ತ ದಾಖಲಾತಿ ಗಳೊಂದಿಗೆ ನಿರೂಪಿಸಲು ಸಿದ್ಧವಿದ್ದು, ಕೇಂದ್ರದ ಈ ಧೋರಣೆಯನ್ನು ಪ್ರಶ್ನಿಸಿ, ನ್ಯಾಯಾಲಯದ ಕದವನ್ನೂ ತಟ್ಟಲಾಗಿದೆ ಎಂದರು.
 
ದೇಶದ ವಿವಿಧೆಡೆಗಳಲ್ಲಿ ಸಂಭವಿಸುವ ಪ್ರಕೃತಿ ವಿಕೋಪಗಳಿಗೆ ಪರಿಹಾರ ನೀಡಲೆಂದು 15ನೇ ಹಣಕಾಸು ಆಯೋಗದಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯನ್ನು  ಕೇಂದ್ರಕ್ಕೆ ನೀಡಲಾಗಿರುತ್ತದೆ. ಎನ್ ಡಿ ಆರ್ ಎಫ್ ಹಣ ರಾಜ್ಯಗಳಿಗೆ ಸೇರಿದ್ದು. ರಾಜ್ಯದ ಜನ ಬರಗಾಲದಿಂದ ತತ್ತರಿಸಿದ್ದರೂ ಸ್ಪಂದಿಸದ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸಬೇಕು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

50 ಬಾರಿ ಪ್ರಯತ್ನಿಸಿದರೂ ಸಿಗದ ಸರ್ಕಾರಿ ಕೆಲಸ: ರಾಜ್ಯಪಾಲರಿಂದ ಚಿನ್ನದ ಪದಕ ಪಡೆದಿದ್ದ ಯುವಕ ಸಾವಿಗೆ ಶರಣು

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಯಾಕೆ ಅಜ್ಜಿ ಚನ್ನಮ್ಮನ ಅಂತ್ಯಸಂಸ್ಕಾರಕ್ಕೆ ಬರಲಿಲ್ಲ: ಇವರೇ ಕಾರಣವಂತೆ

ಉಪವಾಸ ಕೈಬಿಡಲು ಮೂರು ಷರತ್ತುಗಳನ್ನು ಹಾಕಿದ ಸೋನಮ್ ವಾಂಗ್ಚುಕ್

ಕ್ಯಾಬ್ ನಲ್ಲಿ ಯುವ ಜೋಡಿಯ ಖುಲ್ಲಾಂ ಖುಲ್ಲಾಂ ಚೆಲ್ಲಾಟ: ಚಾಲಕ ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್ Video

ಪೊಲೀಸ್ ಕಚೇರಿಯಲ್ಲಿ ಶವವಾಗಿ ಪತ್ತೆಯಾದ ತ್ರಿಪುರಾ ಡಿಜಿಪಿ ಅನುರಾಗ್ ಧಂಕರ್‌, ಸಾವಿನ ಸುತ್ತಾ ಹಲವು ಅನುಮಾನ

ಮುಂದಿನ ಸುದ್ದಿ
Show comments