ಬರ ಪರಿಹಾರ ನೀಡದೆ ಸುಳ್ಳು ಹೇಳಿದ ಅಮಿತ್ ಶಾ: ಸಿದ್ದರಾಮಯ್ಯ

Krishnaveni K
ಬುಧವಾರ, 3 ಏಪ್ರಿಲ್ 2024 (15:22 IST)
ಮೈಸೂರು: ರಾಜ್ಯದ ಜನ ಬರಗಾಲದಿಂದ ತತ್ತರಿಸಿದ್ದರೂ ಸ್ಪಂದಿಸದ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
 
ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಬರ ಘೋಷಣೆ ಆದ ಬಳಿಕ ನಾವು ಸೆಪ್ಟೆಂಬರ್ 23ರಂದೇ ಕೇಂದ್ರಕ್ಕೆ ಮೊದಲ ಮನವಿ ಮಾಡಿದ್ದೇವೆ. ಅಕ್ಟೋಬರ್ ನಲ್ಲಿ ಕೇಂದ್ರ ತಂಡ ರಾಜ್ಯ ಪ್ರವಾಸ ಮಾಡಿ ಬರ ಕುರಿತಂತೆ ವರದಿ ನೀಡಿದೆ. ಈ ತಿಂಗಳಲ್ಲಿಯೇ ಮೂರು ಮನವಿಗಳನ್ನು ಸಲ್ಲಿಸಿದ್ದೇವೆ. ನಂತರ ಡಿಸೆಂಬರ್ 19ರಂದು ನಾನು ಖುದ್ದು ಪ್ರಧಾನ ಮಂತ್ರಿಗಳನ್ನು ಹಾಗೂ 20ರಂದು ಅಮಿತ್ ಶಾ ಅವರನ್ನು ಭೇಟಿಯಾಗಿ, ರಾಜ್ಯದ ಬರ ಪರಿಸ್ಥಿತಿಯ ವಸ್ತುಸ್ಥಿತಿಯನ್ನು ತಿಳಿಸಿದ್ದೇನೆ. ಡಿಸೆಂಬರ್  23ಕ್ಕೆ  ಉನ್ನತ ಮಟ್ಟದ ಸಮಿತಿ ಸಭೆ ನಡೆಸುವುದಾಗಿ ಅಮಿತ್ ಶಾ ಅವರು ತಿಳಿಸಿದ್ದರು. ಮನವಿ ಸಲ್ಲಿಸಿ ಐದು ತಿಂಗಳು ಕಳೆದಿದ್ದರೂ ಅವತ್ತಿಂದ, ಇವತ್ತಿನವರೆಗೂ ಕೇಂದ್ರ ಸರ್ಕಾರ ರಾಜ್ಯಕ್ಕೆ  ಬರ ಪರಿಹಾರವನ್ನು ನೀಡದ ಇವರಿಗೆ ಯಾವ ನೈತಿಕತೆ ಇದೆ. ದೇಶದ ಗೃಹ ಸಚಿವರಾದ ಅಮಿತ್  ಶಾ ಸತ್ಯವನ್ನೂ ನಾಚಿಸುವಂತೆ ಅಪ್ಪಟ ಸುಳ್ಳು ಹೇಳಿದ್ದಾರೆ. ಈ ಎಲ್ಲ ಅಂಶಗಳನ್ನು ಸೂಕ್ತ ದಾಖಲಾತಿ ಗಳೊಂದಿಗೆ ನಿರೂಪಿಸಲು ಸಿದ್ಧವಿದ್ದು, ಕೇಂದ್ರದ ಈ ಧೋರಣೆಯನ್ನು ಪ್ರಶ್ನಿಸಿ, ನ್ಯಾಯಾಲಯದ ಕದವನ್ನೂ ತಟ್ಟಲಾಗಿದೆ ಎಂದರು.
 
ದೇಶದ ವಿವಿಧೆಡೆಗಳಲ್ಲಿ ಸಂಭವಿಸುವ ಪ್ರಕೃತಿ ವಿಕೋಪಗಳಿಗೆ ಪರಿಹಾರ ನೀಡಲೆಂದು 15ನೇ ಹಣಕಾಸು ಆಯೋಗದಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯನ್ನು  ಕೇಂದ್ರಕ್ಕೆ ನೀಡಲಾಗಿರುತ್ತದೆ. ಎನ್ ಡಿ ಆರ್ ಎಫ್ ಹಣ ರಾಜ್ಯಗಳಿಗೆ ಸೇರಿದ್ದು. ರಾಜ್ಯದ ಜನ ಬರಗಾಲದಿಂದ ತತ್ತರಿಸಿದ್ದರೂ ಸ್ಪಂದಿಸದ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸಬೇಕು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಗುವನ್ನು ನೆಲಕ್ಕೆ ಬಡಿದು ಕೊಂದ ಪಾಪಿಗೆ ಗಲ್ಲು ಶಿಕ್ಷೆ: ಎಲ್ಲಾ ಪ್ರಕರಣವೂ ಇಷ್ಟು ಬೇಗ ಇತ್ಯರ್ಥವಾಗಬೇಕು ಎಂದ ಪಬ್ಲಿಕ್

ಒಂದು ಸೂರು, ಆರು ತಲೆಮಾರುಗಳು, 83 ಸದಸ್ಯರು, ನಾಗಪ್ಪರ ಅವಿಭಕ್ತ ಕುಟುಂಬದ ಒಂದು ಲುಕ್, Video

ಮೈಸೂರು ದಸರಾದಲ್ಲಿ ಕಂಬಳ ಬೇಡ ಎಂದ ವಿಜಯೇಂದ್ರ: ಯದುವೀರ್ ಒಡೆಯರ್ ಗೆ ಬೆಂಬಲ

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ, ಆಘಾತಕಾರಿ ಘಟನೆ

ಪಶ್ಚಿಮ ಏಷ್ಯಾ ಬಿಕ್ಕಟ್ಟಿನಲ್ಲಿ ನೌಕಾಪಡೆಯ ಯಶಸ್ಸನ್ನು ಸ್ಮರಿಸಿದ ರಾಜನಾಥ್ ಸಿಂಗ್

ಮುಂದಿನ ಸುದ್ದಿ
Show comments