Publish Date: Thu, 05 Dec 2019 (22:52 IST)
Updated Date: Thu, 05 Dec 2019 (22:53 IST)
ಬಿಜೆಪಿಯವರಿಗೆ ಯಾವುದೇ ನೈತಿಕತೆ ಇಲ್ಲ. ಬಿಜೆಪಿಯವರು ಬಾಯಿಗೆ ಬಂದ ಹಾಗೇ ಮಾತನಾಡುತ್ತಾರೆ. ಅವರು ಹಿಂಬಾಗಿಲಿನಿಂದ ಬಂದು ಅಧಿಕಾರದ ಗದ್ದುಗೆ ಏರಿದವರು. ಹೀಗಂತ ಮಾಜಿ ಸಿಎಂ ಗುಡುಗಿದ್ದಾರೆ.
ವಿಪಕ್ಷ ನಾಯಕ ಸಿದ್ಧರಾಮಯ್ಯನವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದಲ್ಲಿ ಉಪ ಚುನಾವಣೆ ನಡೆದಿದೆ, ಜನ ಯಾವ ತೀರ್ಪು ನೀಡಲಿದ್ದಾರೆ ನೋಡೋಣ ಎಂದರು.
ಸಿದ್ಧರಾಮಯ್ಯಗೆ ಸಿಎಂ ಆಗುವ ಹುಚ್ಚು ಹಿಡಿದಿದೆ ಎಂಬ ಕೆ.ಎಸ್.ಈಶ್ವರಪ್ಪ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ನಾನು ಯಾವಾಗ ಸಿಎಂ ಆಗ್ತೀನಿ ಅಂತಾ ಹೇಳಿದ್ದೇನೆ?. ಉಪಚುನಾವಣೆ ನಂತರ ಬಹುಮತ ಬಂದರೆ ಸರ್ಕಾರ ರಚಿಸುತ್ತೇವೆ ಅಂತಾ ಹೇಳಿದ್ದೇನೆ ಅಷ್ಟೇ ಎಂದರು.
ಜೆಡಿಎಸ್ ಮೈತ್ರಿ ವಿಚಾರವಾಗಿ ಮಾತನಾಡಿದ ಅವರು, ಜೆಡಿಎಸ್ ನೊಂದಿಗೆ ಯಾವುದೇ ಮೈತ್ರಿ ಇಲ್ಲ ಎಂದರು.