Webdunia - Bharat's app for daily news and videos

Install App

ನನಗೂ 100 ವರ್ಷ ಬದುಕುವ ಆಸೆಯಿದೆ, ಆಗುತ್ತೋ ಇಲ್ವೋ ಗೊತ್ತಿಲ್ಲ: ಸಿದ್ದರಾಮಯ್ಯ

Krishnaveni K
ಸೋಮವಾರ, 18 ನವೆಂಬರ್ 2024 (17:15 IST)
ಬೆಂಗಳೂರು: ನನಗೂ 100 ವರ್ಷ ಬದುಕಬೇಕೆಂಬ ಆಸೆಯಿದೆ. ಆದರೆ ನನಗೆ ಮಧುಮೇಹವಿದೆ. 100 ವರ್ಷ ಬದುಕುತ್ತೀನೋ ಇಲ್ವೋ ಗೊತ್ತಿಲ್ಲ. ಹೀಗಂತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಇಂದು ಆಯೋಜಿಸಲಾಗಿದ್ದು ರಮಣಶ್ರೀ ಶರಣ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಅವರು ಹೀಗೆ ಹಾಸ್ಯದ ದಾಟಿಯಲ್ಲಿ ಮಾತನಾಡಿದ್ದಾರೆ.  ರಮಣಶ್ರೀ ಪ್ರಶಸ್ತಿಗೆ ಭಾಜನರಾದ ಹಿರಿಯರು 100 ವರ್ಷ ಬದುಕಲಿ ಎಂದು ಹಾರೈಸಿದ್ದಾರೆ. ನನಗೂ 100 ವರ್ಷ ಬದುಕುವ ಆಸೆ. ಆದರೆ ಅದು ಆಗುತ್ತೋ ಇಲ್ವೋ ಗೊತ್ತಿಲ್ಲ ಎಂದಿದ್ದಾರೆ.

ಮಧುಮೇಹದಿಂದ ಬಳಲುತ್ತಿರುವ ಕಾರಣ 100 ವರ್ಷ ಬದುಕಲು ನನಗೆ ಸಾಧ್ಯವಾಗದು. ವೇದಿಕೆಯಲ್ಲಿರುವ ಸಂಸದ ಬಸವರಾಜ ಬೊಮ್ಮಾಯಿಯವರಿಗೂ ಮಧುಮೇಹ ಸಮಸ್ಯೆಯಿದೆ ಎಂದು ಸಿದ್ದರಾಮಯ್ಯ ನಗುತ್ತಲೇ ಮಾತನಾಡಿದ್ದಾರೆ. ರಾಜಕಾರಣಿಗಳಿಗೆ ಶಿಸ್ತಿನ ಬದುಕು ಬದುಕಲು ಸ್ವಲ್ಪ ಕಷ್ಟ. ಇದಕ್ಕೆ ಬೊಮ್ಮಾಯಿಯವರೂ ಉದಾಹರಣೆ ಎಂದಾಗ ನೆರೆದಿದ್ದವರು ಜೋರಾಗಿ ನಕ್ಕರು.

ಇನ್ನು ರಮಣಶ್ರೀ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ, ಬಸವಣ್ಣನವರಿಗೆ ಸಂಬಂಧಪಟ್ಟ ಯಾವ ಕಾರ್ಯಕ್ರಮವನ್ನೂ ನಾವು ಮಿಸ್ ಮಾಡಲ್ಲ. ಬಸವಣ್ಣನವರ ತತ್ವಗಳಲ್ಲಿ ಕೆಲವನ್ನಾದರೂ ಅಳವಡಿಸಿಕೊಳ್ಳಲು ಪ್ರಯತ್ನಿಸುತ್ತೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments