Webdunia - Bharat's app for daily news and videos

Install App

ಸೈಟು ವಾಪಸ್ ಕೊಟ್ರೆ ತಪ್ಪು ಮಾಡಿದ್ದೀನಿ ಅಂತೇನ್ರೀ, ನಾನು ಯಡಿಯೂರಪ್ಪ ಥರಾ ಅಲ್ಲ: ಸಿದ್ದರಾಮಯ್ಯ

Krishnaveni K
ಮಂಗಳವಾರ, 1 ಅಕ್ಟೋಬರ್ 2024 (15:42 IST)
ಬೆಂಗಳೂರು: ಸೈಟ್ ವಾಪಸ್ ಕೊಟ್ರೆ ನಾನು ತಪ್ಪು ಮಾಡಿದ್ದೀನಿ ಅಂತನೇನ್ರೀ.. ಹೀಗಂತ ಮುಡಾ ಸೈಟು ವಾಪಸ್ ಕೊಟ್ಟಿದ್ದಕ್ಕೆ ವಿಪಕ್ಷಗಳ ಪ್ರತಿಕ್ರಿಯೆ ಕುರಿತು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಮಾಧ್ಯಮದವರೊಂದಿಗೆ ಮಾತನಾಡಿದ್ದು ನನ್ನ ಪತ್ನಿ ಮನನೊಂದು ಸೈಟು ವಾಪಸ್ ಮಾಡಿದ್ದಾರೆ. ಹಾಗಂತ ನಾನು ತಪ್ಪು ಮಾಡಿದ್ದೇನೆ ಎಂದು ಅರ್ಥ ಆಗುತ್ತಾ? ಎಂದು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಮೊದಲು ಬಿಜೆಪಿ ನಾಯಕರು ಸೈಟು ವಾಪಸ್ ಮಾಡಿದ್ದಾರೆ ಎಂದು ತಪ್ಪು ಒಪ್ಪಿಕೊಂಡ ಹಾಗೆ ಎಂದಿದ್ದರು.

ಅಲ್ಲದೆ, ಬಿ ವೈ ವಿಜಯೇಂದ್ರ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದರು. ಅದರಲ್ಲಿ ಈ ಹಿಂದೆ ಸಿಎಂ ಸಿದ್ದರಾಮಯ್ಯ ಯಡಿಯೂರಪ್ಪನವರ ಭೂಹಗರಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಸೈಟು ವಾಪಸ್ ಮಾಡಿದ್ದಾರೆಂದರೆ ತಪ್ಪು ಮಾಡಿದ್ದಾರೆ ಎಂದರ್ಥ ಎಂದಿದ್ದರು. ಅದನ್ನೇ ಇಟ್ಟುಕೊಂಡು ಈಗ ಬಿಜೆಪಿ ಟಾಂಗ್ ಕೊಟ್ಟಿದೆ.

ಈಗ ಇದಕ್ಕೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ನನ್ನ ಮೇಲೆ ಆರೋಪ ಬಂದಿದ್ದಕ್ಕೆ ಮನನೊಂದು ಪತ್ನಿ ಸೈಟ್ ವಾಪಸ್ ಮಾಡಿದ್ದಾರೆ. ನಾನು ಯಡಿಯೂರಪ್ಪನವರ ಥರಾ ಡಿನೋಟಿಫಿಕೇಷನ್ ಮಾಡಿಲ್ಲ. ನಮ್ಮ ಸೈಟ್ ಸ್ವಾಧೀನಪಡಿಸಿಕೊಂಡಿದ್ದಕ್ಕೆ ಮುಡಾದವರು ಪರಿಹಾರವಾಗಿ ಇನ್ನೊಂದು ಸೈಟ್ ಕೊಟ್ಟಿದ್ದಾರೆ. ಅದೂ ನಾವು ಇಂಥಾ ಜಾಗದಲ್ಲೇ ಕೊಡಿ ಎಂದು ಕೇಳಿಲ್ಲ. ನಾನು ಯಾವುದೇ ಆದೇಶ ನೀಡಿರಲಿಲ್ಲ. ಹೀಗಿರುವಾಗ ನನ್ನ ತಪ್ಪು ಹೇಗಾಗುತ್ತದೆ? ನಾನು ತಪ್ಪೇ ಮಾಡದೇ ಇರುವಾಗ ರಾಜೀನಾಮೆ ಕೊಡುವ ಪ್ರಶ್ನೆ ಎಲ್ಲಿದೆ ಎಂದಿದ್ದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಬೆಂಗಳೂರು ಮಳೆಯಲ್ಲಿ ಮುಳುಗಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

ಮುಂದಿನ ಸುದ್ದಿ
Show comments