ಸಾಕ್ಷ್ಯ ಇಲ್ಲ ಅಂದ್ರೆ ಆರೋಪವೇ ಮಾಡಿಲ್ಲ ಅಂತಲ್ಲ ಎಂದ ಸಿದ್ದರಾಮಯ್ಯ: ಮುಡಾ ಕೇಸ್ ಕೂಡಾ ಹೀಗೇನಾ

Krishnaveni K
ಸೋಮವಾರ, 18 ನವೆಂಬರ್ 2024 (08:50 IST)
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ 40 ಪರ್ಸೆಂಟ್ ಕಮಿಷನ್ ಆರೋಪದ ಬಗ್ಗೆ ಪ್ರತಿಕ್ರಿಯಿಸುವಾಗ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಅವರಿಗೇ ಮುಳುವಾಗಿದೆ. ಇದರ ಬಗ್ಗೆ ನೆಟ್ಟಿಗರು ಅವರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಶೇ.40 ಗುತ್ತಿಗೆದಾರರಿಂದ ಕಮಿಷನ್ ಪಡೆಯಲಾಗುತ್ತಿತ್ತು ಎಂದು ಕಾಂಗ್ರೆಸ್ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡಿತ್ತು. ಆ ವಿಚಾರ ಈಗ ಸದ್ದು ಮಾಡುತ್ತಿದೆ. ಇದರ ಬಗ್ಗೆ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯ, ಗುತ್ತಿಗೆದಾರ ಸಂಘದ ಅಧ್ಯಕ್ಷ ಕೆಂಪಣ್ಣ ಕೊಟ್ಟ ದೂರಿನ ಆಧಾರದಲ್ಲಿ ನಾವು ತನಿಖೆಗೆ ಸೂಚಿಸಿದ್ದೆವು. ಆದರೆ ಆರೋಪ ಸಾಬೀತಾಗಲಿಲ್ಲ. ಕೆಲವೊಮ್ಮೆ ಸಾಕ್ಷ್ಯಾಧಾರಗಳ ಕೊರತೆಯಿಂದ ಕೊಲೆ ಆರೋಪಿಗಳ ಖುಲಾಸೆ ಆಗುತ್ತದೆ. ಹಾಗಂತ ಕೊಲೆಯೇ ಆಗಿಲ್ಲ ಎಂದು ಅರ್ಥ ಅಲ್ಲ. ಕೊಲೆ ನಡೆದಿರುತ್ತದೆ. ಆದರೆ ಸಾಕ್ಷ್ಯಗಳು ಸಾಕ್ಷ್ಯ ಹೇಳಿರುವುದಿಲ್ಲ ಅಷ್ಟೇ. ಇದೂ ಹಾಗೆಯೇ ಎಂದು ಸಿದ್ದರಾಮಯ್ಯ ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದರು.

ಆದರೆ ಅವರ ಈ ಹೇಳಿಕೆಗೆ ಈಗ ಸಾರ್ವಜನಿಕರು ಟೀಕೆ ಮಾಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಅವರ ಈ ಕಾಮೆಂಟ್ ಗೆ ಕಾಮೆಂಟ್ ಮಾಡಿರುವ ನೆಟ್ಟಿಗರೊಬ್ಬರು ಹಾಗಿದ್ದರೆ ಮುಡಾ ಕೇಸ್ ಕೂಡಾ ಹೀಗೇ ಆಗಿರಬಹುದಲ್ವೇ ಎಂದು ಪ್ರಶ್ನೆ ಮಾಡಿ ತಿರುಗೇಟು ಕೊಟ್ಟಿದ್ದಾರೆ.

ಮುಡಾ ಕೇಸ್ ನಲ್ಲೂ ಸಿದ್ದರಾಮಯ್ಯ ನನ್ನ ಪಾತ್ರವಿಲ್ಲ, ನಾನು ಅಕ್ರಮ ಮಾಡಿಲ್ಲ ಎಂದು ಹೇಳುತ್ತಲೇ ಬಂದಿದ್ದಾರೆ. ಆದರೆ ಸಾಮಾಜಿಕ ಕಾರ್ಯಕರ್ತರ ಸ್ನೇಹಮಯಿ ಕೃಷ್ಣ ಸಿಎಂ ಪತ್ನಿಗೆ ಅಕ್ರಮವಾಗಿ 14 ಸೈಟು ನೀಡಲಾಗಿದೆ ಎಂದು ಆರೋಪಿಸಿದ್ದಾರೆ. ಈ ಪ್ರಕರಣ ತನಿಖಾ ಹಂತದಲ್ಲಿ ಈ ಕೇಸ್ ಕೂಡಾ ಹಾಗೆಯೇ ಸಾಕ್ಷ್ಯವಿಲ್ಲ ಎಂದ ಮಾತ್ರಕ್ಕೆ ಅಪರಾಧವೇ ಆಗಿಲ್ಲ ಎಂದು ಅರ್ಥ ಅಲ್ಲವಲ್ಲ ಎಂದು ನೆಟ್ಟಿಗರು ಸಿದ್ದರಾಮಯ್ಯ ಮಾತನ್ನು ಅವರಿಗೇ ತಿರುಗಿಸಿಕೊಟ್ಟಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಉತ್ತರ ಕರ್ನಾಟಕಕ್ಕೆ ಆದ್ಯತೆ ಕೊಡಿ, ಇಲ್ಲಾಂದ್ರೆ ರಾಜೀನಾಮೆ ಕೊಡಿ: ಛಲವಾದಿ ನಾರಾಯಣಸ್ವಾಮಿ

ಪಂಜಾಬ್ ನಲ್ಲೇ 500 ಕೋಟಿ, ನಮ್ಮಲ್ಲಿ ಕಾಂಗ್ರೆಸ್ಸಿಗರು ಹೈಕಮಾಂಡ್ ಗೆ ಎಷ್ಟು ಕೊಡ್ತಾರೋ: ಆರ್ ಅಶೋಕ್

ಮುಂದಿನ ಸುದ್ದಿ
Show comments