Webdunia - Bharat's app for daily news and videos

Install App

ಎಲ್ಲಾ ಇಲ್ಲಿಗೇ ನಿಂತಿಲ್ಲ... ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು

ಕೃಷ್ಣವೇಣಿ ಕೆ
ಗುರುವಾರ, 28 ಮೇ 2026 (16:34 IST)
ಬೆಂಗಳೂರು: ನಾನು ರಾಜೀನಾಮೆ ನೀಡಿರುವುದು ಮುಖ್ಯಮಂತ್ರಿ ಹುದ್ದೆಗೆ ಮಾತ್ರ.. ಇಲ್ಲಿಗೇ ಎಲ್ಲಾ ನಿಂತಿಲ್ಲ.. ಸಿಎಂ ಹುದ್ದೆಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು.

ಕರ್ನಾಟಕ ಸಿಎಂ ಸ್ಥಾನಕ್ಕೆ ಇಂದು ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ. ಲೋಕಭವನಕ್ಕೆ ಇಂದು ಡಿಕೆ ಶಿವಕುಮಾರ್, ಡಾ ಜಿ ಪರಮೇಶ್ವರ್ ಮತ್ತು ಮಹದೇವಪ್ಪ ಜೊತೆ ತೆರಳಿದ ಸಿದ್ದರಾಮಯ್ಯ ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಇದರ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಅವರು ವಿದಾಯ ಭಾಷಣ ಹಂಚಿಕೊಂಡಿದ್ದಾರೆ. ಈ ವೇಳೆ ಸಂವಿಧಾನವೇ ನನ್ನ ಧರ್ಮ, ಅಭಿಮಾನಿಗಳೇ ನನ್ನ ದೇವರು ಎಂದು ಹೇಳಿಕೆ ನೀಡಿದ್ದಾರೆ. ಇದರ ಜೊತೆಗೆ ಕೊನೆಯಲ್ಲಿ ಒಂದು ಮಾತು ಹೇಳಿದ್ದು ಇದು ಎಲ್ಲರ ಗಮನ ಸೆಳೆಯುವಂತಿದೆ.

ಸಂವಿಧಾನವೇ ನನಗೆ ಧರ್ಮ, ಜನರೇ ನನ್ನ ಪಾಲಿನ ದೇವರು. ನನ್ನ ರಾಜೀನಾಮೆ ಮುಖ್ಯಮಂತ್ರಿ ಹುದ್ದೆಗೆ ಮಾತ್ರವೇ ಸೀಮಿತ, ಸಕ್ರಿಯ ರಾಜಕಾರಣಕ್ಕಲ್ಲ. ನನ್ನ ಜೀವದ ಕೊನೆಯುಸಿರು ಇರುವ ವರೆಗೂ ಸಾಮಾಜಿಕ ನ್ಯಾಯಕ್ಕಾಗಿ ಮತ್ತು ಸಂವಿಧಾನ ವಿರೋಧಿ ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಟ ಮಾಡುತ್ತೇನೆ ಎಂದಿದ್ದಾರೆ. ಆ ಮೂಲಕ ಸಕ್ರಿಯ ರಾಜಕೀಯದಲ್ಲಿ ತಾನು ಇನ್ನೂ ಮುಂದುವರಿಯುವುದಾಗಿ ಸ್ಪಷ್ಟವಾಗಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ, ದೆಹಲಿ ಇಂದಿರಾಗಾಂಧಿ ಏರ್‌ಪೋರ್ಟ್‌ ಒಳಗೂ ನುಗ್ಗಿದ ನೀರು, Video

ಆಪರೇಷನ್ ಆಶ್ದಾರ್ ಅಡಿಯಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಂತರ್ ಮಂತರ್‌ನಲ್ಲಿ ನಡೆದ ಹಲ್ಲೆ ಪ್ರಕರಣ: 72 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಬೇಕು

ಇದೊಂದು ಪವಾಡ: 10ದಿನಗಳ ಬಳಿಕ ಬದುಕುಳಿದ ಮಹರ್ಜನ್ ಕುಟುಂಬದ ಪ್ರತಿಕ್ರಿಯೆ

ಡಿಕೆ ಶಿವಕುಮಾರ್‌ ಡಮ್ಮಿ, ರಿಮೋಟ್ ಕಂಟ್ರೋಲ್ಡ್‌ ಸಿಎಂ: ಆರ್‌ ಅಶೋಕ್ ಕಿಡಿ

ಮುಂದಿನ ಸುದ್ದಿ
Show comments