ನಾವು ನಿಜವಾದ ಹಿಂದುತ್ವವಾದಿಗಳು, ಬಿಜೆಪಿಯವರು ಕೊಲೆಗಡುಕರು: ಸಿದ್ದರಾಮಯ್ಯ

Krishnaveni K
ಮಂಗಳವಾರ, 21 ಜನವರಿ 2025 (14:54 IST)
ಬೆಳಗಾವಿ : ರಾಮ ಭಕ್ತರಾಗಿ ಅತ್ಯುತ್ತಮ‌ ಹಿಂದೂ ಆಗಿದ್ದ ಮಹಾತ್ಮ ಗಾಂಧಿಯನ್ನು BJP ಪರಿವಾರದ ಗೋಡ್ಸೆ ಹತ್ಯೆ ಮಾಡಿದ. ನಾವು ಮಹಾತ್ಮಗಾಂಧಿ ಅವರ ಹಿಂದೂತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ ಸಿದ್ಧಾಂತವನ್ನು ಪಾಲಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. 
 
ಸುವರ್ಣಸೌಧದಲ್ಲಿ ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದರು. 
 
ಗಾಂಧಿಯವರು ಹಿಂದೂತ್ವದ ದ್ವೇಷಿಯಾಗಿರುವ, ಗಾಂಧಿ ತತ್ವದ ವಿರೋಧಿಯಾಗಿರುವ ಬಿಜೆಪಿ ಪರಿವಾರ ಸಂವಿಧಾನ ವಿರೋಧಿ-ಅಂಬೇಡ್ಕರ್ ದ್ವೇಷಿಯೂ ಆಗಿದೆ ಎಂದರು.
 
ನಾವು ಮಹಾತ್ಮಗಾಂಧಿಯವರ ವಿಚಾರಗಳನ್ನು ಮುಂದಿನ ಪೀಳಿಗೆಗೆ ಇನ್ನಷ್ಟು ಅರ್ಥಪೂರ್ಣವಾಗಿ ತಲುಪಿಸುವ, ಗಾಂಧಿಯವರ ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡುವ ಗುರಿಯೊಂದಿಗೆ ಜೈ ಭಾಪು-ಜೈ ಭೀಮ್-ಜೈ ಸಂವಿಧಾನ ಅಭಿಯಾನಯನ್ನು ಮುನ್ನಡೆಸುತ್ತೇವೆ ಎಂದರು. 
 
ನೂರು ವರ್ಷಗಳ ಹಿಂದೆ ಕರ್ನಾಟಕದಲ್ಲಿ ನಡೆದ ಎಐಸಿಸಿ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದು ಮಹಾತ್ಮಗಾಂಧಿ. ಆ ದಿನ ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಈ ನೆಲದಲ್ಲಿ ಹೆಚ್ಚಿಸಿದರು ಎಂದು ಸ್ಮರಿಸಿದರು.  
 
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಂಸದೆ ಪ್ರಿಯಾಂಕ ಗಾಂಧಿ, ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಉಪ ಅಧ್ಯಕ್ಷ ಲಮಾಣಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಯಾಣದೂದ್ದಕ್ಕೂ ಯುವತಿ ಕೈ ಕಾಲು, ಮುಟ್ಟಿ ದೌರ್ಜನ್ಯ, ರ‍್ಯಾಪಿಡೋ ಬೈಕ್‌ ಸವಾರ ಅರೆಸ್ಟ್‌

ಭಯೋತ್ಪಾದನೆ ವಿಚಾರವಾಗಿ ಮತ್ತೇ ಪಾಕ್, ಅಫ್ಘಾನಿಸ್ತಾನ ನಡುವೆ ಮಾತುಕತೆ ವಿಫಲ

ವೋಟ್ ಚೋರಿ ಕಲ್ಪನೆಯ ಜನಕ ಯಾರೆಂದು ಎಸ್.ಸುರೇಶ್ ಕುಮಾರ್ ಪ್ರಶ್ನೆ

ಯಶಸ್ವಿ ರಾಜಕೀಯ ಜೀವನವನ್ನು ಹೊಂದಲು ಸುಳ್ಳು ಹೇಳುವುದು ಸರಿಯೇ: ರಾಹುಲ್ ಗಾಂಧಿಯನ್ನು ಕುಟುಕಿದ ರಾಜನಾಥ್ ಸಿಂಗ್

ಉಪರಾಷ್ಟ್ರಪತಿ ರಾಧಾಕೃಷ್ಣನ್‌ ರಾಜ್ಯದ ಮೊದಲ ಭೇಟಿಯಲ್ಲೇ ಹಲವು ಮಹತ್ವದ ಕಾರ್ಯಕ್ರಮ

ಮುಂದಿನ ಸುದ್ದಿ
Show comments