Webdunia - Bharat's app for daily news and videos

Install App

ಸಿದ್ದರಾಮಯ್ಯ ರಾತ್ರಿ ಸೀಕ್ರೆಟ್ ನ್ನು ಅವರ ಮನೆ ಕೆಲಸದವರೇ ಹೇಳ್ತಾರೆ: ಎಚ್ ಡಿ ಕುಮಾರಸ್ವಾಮಿ

Krishnaveni K
ಶನಿವಾರ, 28 ಸೆಪ್ಟಂಬರ್ 2024 (13:28 IST)
ಬೆಂಗಳೂರು: ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಹೆದರಿ ರಾತ್ರಿಯೆಲ್ಲಾ ನಿದ್ರೆಗೆಟ್ಟು ಕೂತಿದ್ದರು ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಕಾಲೆಳೆದಿದ್ದಾರೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಅವರು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಮುಡಾ ಹಗರಣದಲ್ಲಿ ನಾನೇನೂ ತಪ್ಪು ಮಾಡಿಲ್ಲ. ನಾನು ಯಾರಿಗೂ ಹೆದರಲ್ಲ ಎಂದು ಬಾಯಿ ಮಾತಿನಲ್ಲಿ ಹೇಳ್ತಾರೆ. ಆದರೆ ಪಾಪ ಅವರ ಮನೆ ಕೆಲಸದವರೇ ಹೇಳ್ತಾರೆ. ಸಾಹೇಬ್ರು ರಾತ್ರಿಯೆಲ್ಲಾ ನಿದ್ರೆಗೆಟ್ಟು ಕೂತಿದ್ದರು. ಮಧ್ಯರಾತ್ರಿ ದಿಗ್ಗನೆ ಎದ್ದು ಕೂತ್ಕೊಂಡ್ರು, ಡಾಕ್ಟರನ್ನೆಲ್ಲಾ ಕರೆಸಿಕೊಂಡ್ರು. ಬಳಿಕ ಡಾಕ್ಟರಿಗೂ ನೀವು ಎಲ್ಲೂ ಹೋಗಬೇಡಿ ಎಂದು ಹೇಳಿದ್ದರು ಎಂದು ಕುಮಾರಸ್ವಾಮಿ ನಗುತ್ತಾ ಹೇಳಿದ್ದಾರೆ.

ನಾನು ರಾಜೀನಾಮೆ ಕೊಡಬೇಕು ಎಂದು ಸಿದ್ದರಾಮಯ್ಯ ಹೇಳ್ತಾರಲ್ಲ. ನಾನೇನು ತಪ್ಪು ಮಾಡಿದ್ದೀನಿ. ನನ್ನ ಮೇಲೆ ಏನು ಕೇಸ್ ಇದೆ ಹೇಳಲಿ ನೋಡೋಣ. ಗಂಗೇನಹಳ್ಳಿ ಕೇಸ್ ನಲ್ಲಿ ನನ್ನ ಪಾತ್ರವೇನು? ದಾಖಲೆಗಳು ನಿಮ್ಮ ಮುಂದೆ ಇದೆ. ಕುಮಾರಸ್ವಾಮಿ ಏನು ನಿರ್ಧಾರ ತೆಗೆದುಕೊಂಡಿದ್ದರು ಎಂಬ ದಾಖಲೆಗಳೂ ಇವೆ. ಹೌದು, ನಾನು ಸಹಿ ಹಾಕಿದ್ದೆ. ಸಾವಿರಾರು ಅರ್ಜಿಗಳು ನನ್ನ ಮುಂದೆ ಬರುತ್ತವೆ. ಅದನ್ನು ವಿಲೇವಾರಿ ಮಾಡಿ ಎಂದು ಸಹಿ ಹಾಕಿ ಆಯಾ ಇಲಾಖೆಗೆ ಕಳುಹಿಸುತ್ತೇವೆ’ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಕುಮಾರಸ್ವಾಮಿ ಈಗಾಗಲೇ ಲೋಕಾಯುಕ್ತ ಮುಂದೆ ತನಿಖೆಗೆ ಹಾಜರಾಗಿದ್ದಾರೆ. ಅದರ ಬೆನ್ನಲ್ಲೇ ಇಂದು ಅವರು ಪತ್ರಿಕಾಗೋಷ್ಠಿ ನಡೆಸಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments