Webdunia - Bharat's app for daily news and videos

Install App

ಇಸ್ರೋಗೆ ಅಭಿನಂದನೆ ತಿಳಿಸಿದ ಸಿದ್ದರಾಮಯ್ಯ, ಶಿವಕುಮಾರ್

Webdunia
ಗುರುವಾರ, 24 ಆಗಸ್ಟ್ 2023 (09:23 IST)
ಬೆಂಗಳೂರು : ಭಾರತ ಹೊಸ ಇತಿಹಾಸ ನಿರ್ಮಿಸಿದೆ. ಶಶಿಯ ರಹಸ್ಯ ಬೇಧಿಸಲು 40 ದಿನದ ಹಿಂದೆ ನಭಕ್ಕೆ ಚಿಮ್ಮಿದ್ದ ಭಾರತದ ಚಂದ್ರಯಾನ 3 ನೌಕೆ ಚಂದಿರನ ದಕ್ಷಿಣ ಧ್ರುವದಲ್ಲಿ ಇಳಿದು ಜೈ ಹಿಂದ್ ಎಂದಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಸ್ರೋಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
 
ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ, ಚಂದ್ರಯಾನ-3 ರ ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಸುರಕ್ಷಿತವಾಗಿ ಇಳಿಯುವ ಐತಿಹಾಸಿಕ ಕ್ಷಣಗಳನ್ನು ಕಣ್ತುಂಬಿಕೊಂಡೆ. ವಿಜ್ಞಾನಿಗಳ ದಶಕಗಳ ಪರಿಶ್ರಮವು ನನ್ನಂತ ಕೋಟ್ಯಂತರ ಭಾರತೀಯರ ಕನಸನ್ನು ನನಸಾಗಿಸಿದೆ. ಚಂದ್ರನ ಮೇಲೆ ಭಾರತದ ಪತಾಕೆ ಹಾರಿಸಿ ದೇಶವಾಸಿಗಳು ಹೆಮ್ಮೆಪಡುವಂತೆ ಮಾಡಿದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ಇಡೀ ದೇಶವೇ ನಿರೀಕ್ಷೆ ಹೊಂದಿದ್ದ ಚಂದ್ರಯಾನ-3 ಯೋಜನೆ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈ ಯೋಜನೆಗಾಗಿ ಶ್ರಮಿಸಿದ ಇಸ್ರೋ ಸಂಸ್ಥೆಯ ಎಲ್ಲ ವಿಜ್ಞಾನಿಗಳು ಹಾಗೂ ಸಿಬ್ಬಂದಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹೃದಯಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಗುಡ್ ನ್ಯೂಸ್, ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಸಣ್ಣ ಮಳೆ ಸಾಧ್ಯತೆ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments