ಸಿಎಂ ಕುರ್ಚಿ ಬಗ್ಗೆ ಡಿಕೆ ಶಿವಕುಮಾರ್ ಎದುರೇ ಸಿದ್ದರಾಮಯ್ಯ ಶಾಕಿಂಗ್ ಮಾತುಗಳು

Krishnaveni K
ಗುರುವಾರ, 8 ಜನವರಿ 2026 (10:16 IST)
ಹಾವೇರಿ: ಇಷ್ಟು ದಿನ ನಾನೇ ಐದು ವರ್ಷ ಸಿಎಂ ಎನ್ನುತ್ತಿದ್ದ ಸಿದ್ದರಾಮಯ್ಯ ಹಾವೇರಿ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಎದುರೇ ಕುರ್ಚಿ ಬಿಟ್ಟು ಕೊಡುವ ಬಗ್ಗೆ ಶಾಕಿಂಗ್ ಮಾತುಗಳನ್ನಾಡಿದ್ದಾರೆ.

ಮೊನ್ನೆಯಷ್ಟೇ ಸುದೀರ್ಘ ಕಾಲ ಮುಖ್ಯಮಂತ್ರಿ ಎಂದು ದೇವರಾಜ ಅರಸು ದಾಖಲೆ ಮುರಿದಿದ್ದ ಸಿದ್ದರಾಮಯ್ಯ ನಿನ್ನೆ ಹಾವೇರಿಯಲ್ಲಿ ನಡೆದಿದ್ದ ಕಾರ್ಯಕ್ರಮವೊಂದರ ವೇದಿಕೆಯಲ್ಲೇ ಸಿಎಂ ಕುರ್ಚಿ ಬಗ್ಗೆ ಮಾರ್ಮಿಕವಾಗಿ ಮಾತನಾಡಿ ಶಾಕ್ ಕೊಟ್ಟಿದ್ದಾರೆ. ವಿಶೇಷವೆಂದರೆ ಈ ವೇದಿಕೆಯಲ್ಲಿ ಡಿಕೆ ಶಿವಕುಮಾರ್ ಕೂಡಾ ಇದ್ದರು.

ನಾನು ಸಾಕಷ್ಟು ಜನಪರ ಯೋಜನೆಗಳನ್ನು ನೀಡಿದ್ದೇನೆ. ಆದರೆ ಎಷ್ಟು ದಿನ ಮುಖ್ಯಮಂತ್ರಿಯಾಗಿ ಇರುತ್ತೇನೋ ಇಲ್ಲವೋ ಗೊತ್ತಿಲ್ಲ. ಆದರೆ ನನಗಂತೂ ನನ್ನ ಆಡಳಿತದ ಬಗ್ಗೆ ತೃಪ್ತಿ ಇದೆ ಎಂದು ಸಿಎಂ ಸಿದ್ದರಾಮಯ್ಯ ಸಂಚಲನ ಸೃಷ್ಟಿಸುವ ಹೇಳಿಕೆ ನೀಡಿದ್ದಾರೆ.

‘ಜನಾಶೀರ್ವಾದಿಂದ ಇಲ್ಲಿಯವರೆಗೂ ಬಂದಿದ್ದೇನೆ. ಮುಂದೆ ಎಷ್ಟು ದಿನ ಇರ್ತೇನೋ ಗೊತ್ತಿಲ್ಲ. ಹೈಕಮಾಂಡ್ ಹೇಳುವವರೆಗೂ ಮುಂದುವರಿಯುತ್ತೇನೆ. ಆದರೆ ನನ್ನ ಆಡಳಿತದ ಬಗ್ಗೆ ನನಗೆ ತೃಪ್ತಿಯಿದೆ’ ಎಂದಿದ್ದಾರೆ. ಆ ಮೂಲಕ ಸಿಎಂ ಕುರ್ಚಿ ಬಗ್ಗೆ ಡಿಕೆಶಿ ಎದುರೇ ಶಾಕಿಂಗ್ ಹೇಳಿಕೆಯನ್ನು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments