Publish Date: Thu, 05 Jan 2023 (09:49 IST)
Updated Date: Thu, 05 Jan 2023 (09:51 IST)
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಗ್ಗೆ ಟೀಕಿಸುವಾಗ ಮಾಜಿ ಮುಖ್ಯಮಂತ್ರಿ, ವಿಧಾನಸಭೆಯ ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರು ಬಳಸಿದ ಭಾಷೆ, ಅವರ ಘನತೆಗೆ ತಕ್ಕುದಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿಕಾರಿದರು.
ರಾಜ್ಯದ ಚುಕ್ಕಾಣಿ ಹಿಡಿದಿರುವ ಬಸವರಾಜ ಬೊಮ್ಮಾಯಿ ಅವರನ್ನು ಸಂಭೋದಿಸಿ, ಸಿದ್ದರಾಮಯ್ಯ ಅವರು ಆಡಿದ ಮಾತುಗಳು, ಸಾಂಸ್ಕೃತಿಕ ಪ್ರಜ್ಞೆ ಇರುವ ಎಲ್ಲರ ಮನ ನೋಯಿಸಿದೆ ಎಂದು ಹೇಳಿದರು.