Webdunia - Bharat's app for daily news and videos

Install App

ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕಾಗಿತ್ತು: ನಾರಾಯಣಸ್ವಾಮಿ ಕಿಡಿ

Sampriya
ಬುಧವಾರ, 6 ನವೆಂಬರ್ 2024 (15:27 IST)
Photo Courtesy X
ಹಾವೇರಿ: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕಾಗಿತ್ತು ಎಂದು ಶಿಗ್ಗಾಂವಿಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ  ಕಿಡಿಕಾರಿದ್ದಾರೆ.

ಪ್ರಶ್ನೆ ಮಾಡುವುದಕ್ಕೆ ಲೋಕಾಯುಕ್ತ ಅಧಿಕಾರಿಗಳು ಎಷ್ಟು ಧೈರ್ಯ ಮಾಡಬಹುದು. ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕಾಗಿತ್ತು. 10 ಗಂಟೆಗೆ ಸಿದ್ದರಾಮಯ್ಯ ತನಿಖೆಗೆ ಹೋಗಿದ್ದಾರೆ. ಎರಡು ತಾಸಿಗೆ ವಿಚಾರಣೆ ಮುಗಿದು ಹೋಗುತ್ತದೆ. ಇದು ಪೂರ್ವನಿರ್ಧಾರಿತವಾಗಿದೆ ಎಂದು ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.

ಈ ವಿಚಾರಣೆಯಿಂದ ಸತ್ಯ ಹೊರಗೆ ಬರುವುದು ಸಾಧ್ಯವೇ ಇಲ್ಲ. ಅವರೇ ಸ್ಕ್ರಿಪ್ಟ್ ಬರೆದುಕೊಟ್ಟು ಇವರೇ ಉತ್ತರ ಕೊಟ್ಟು ಹೀಗೇ ಕೇಳಬೇಕು ಎಂದು ಇವರೇ ಹೇಳಿಕೊಟ್ಟಿದ್ದಾರೆ. ಇಷ್ಟೇ ಪ್ರಶ್ನೆ ಕೇಳ್ತಾರೆ, ಇಷ್ಟೇ ಸಮಯಕ್ಕೆ ಮುಗಿಯುತ್ತದೆ ಎಂಬುದು ಮೊದಲೇ ಸಿದ್ದರಾಮಯ್ಯಗೆ ಗೊತ್ತಾ? ಇದೆಲ್ಲ ಸ್ಟೆಜ್ ಮ್ಯಾನೇಜ್ಡ್ ವಿಚಾರಣೆ. ನಿಮ್ಮನ್ನು ಕಂಡು ಲೋಕಾ ಅಧಿಕಾರಿಗಳಿಗೆ ಭಯ ಬಂದಿರಬೇಕು. ಎಲ್ಲರ ಬಗ್ಗೆಯೂ ಮಾತನಾಡುವ ಸಿಎಂ ನೀವು ಮಾತ್ರ ಹೇಗೆ ಅಧಿಕಾರದಲ್ಲಿ ಇರ್ತೀರಿ? ನಾಗೇಂದ್ರನನ್ನು ಜೈಲಿಗೂ ಕಳಿಸಿದ್ರಿ, ರಾಜೀನಾಮೆ ಪಡೆದು ಕೆಳಗೆ ಇಳಿಸಿದ್ದೀರಿ ಎಂದು ಗುಡುಗಿದರು.  

ಲೋಕಾ ಅಧಿಕಾರಿಗಳು ನಿಮ್ಮನ್ನು ಪ್ರಶ್ನೆ ಮಾಡುವುದಕ್ಕೆ ಸಾಧ್ಯ ಇಲ್ಲ. ವಿಚಾರಣೆಗೆ ಬರಲಿಲ್ಲ ಅಂತ ಅನಿಸಿಕೊಳ್ಳಬಾರದು ಎಂದು ಹೋಗಿದ್ದಾರೆ. ಇದು ಪೂರ್ವನಿರ್ಧಾರಿತ ಎಂದು ನಿಮ್ಮ ಟಿಪಿ ನೋಡಿದರೆ ಗೊತ್ತಾಗುತ್ತದೆ. ಕೋರ್ಟ್‌ಗೂ ನಾವು ಹೋಗುತ್ತೇವೆ. ಸಿಎಂ ದೋಖಾ ಮಾಡುತ್ತಿದ್ದಾರೆ, ರಾಜ್ಯದ ಜನರಿಗೆ ವಂಚನೆ ಮಾಡುತ್ತಿದ್ದಾರೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ರಾಪ್ತ ಮಗಳ ಮೇಲೆ ಮೂರು ವರ್ಷ ಲೈಂಗಿಕ ದೌರ್ಜನ್ಯ: ಪಾಪಿ ಅಪ್ಪನಿಗೆ ಜೀವಾವಧಿ ಶಿಕ್ಷೆ

ಯೋಗಿ ಸಿಎಂ ಆದ್ಮೇಲೆ ಯುಪಿಯಲ್ಲಿ 15 ಸಾವಿರ ಎನ್‌ಕೌಂಟರ್‌, 30 ಸಾವಿರ ಕ್ರಿಮಿನಲ್‌ಗಳ ಅರೆಸ್ಟ್‌

ಜಮೀನು ಒತ್ತುವರಿ ಪ್ರಕರಣ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಕುಮಾರಸ್ವಾಮಿಗೆ ಬಿಗ್ ರಿಲೀಫ್‌

ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳ ಡಿಎನ್‌ಎ ಟೆಸ್ಟ್‌ಗೆ ಮುಂದಾದ ಪಂಜಾಬ್ ಸರ್ಕಾರ

ಶುಭಾಂಶು ಶುಕ್ಲಾ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಇಸ್ರೋ

ಮುಂದಿನ ಸುದ್ದಿ
Show comments