Webdunia - Bharat's app for daily news and videos

Install App

ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕಾಗಿತ್ತು: ನಾರಾಯಣಸ್ವಾಮಿ ಕಿಡಿ

Sampriya
ಬುಧವಾರ, 6 ನವೆಂಬರ್ 2024 (15:27 IST)
Photo Courtesy X
ಹಾವೇರಿ: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕಾಗಿತ್ತು ಎಂದು ಶಿಗ್ಗಾಂವಿಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ  ಕಿಡಿಕಾರಿದ್ದಾರೆ.

ಪ್ರಶ್ನೆ ಮಾಡುವುದಕ್ಕೆ ಲೋಕಾಯುಕ್ತ ಅಧಿಕಾರಿಗಳು ಎಷ್ಟು ಧೈರ್ಯ ಮಾಡಬಹುದು. ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕಾಗಿತ್ತು. 10 ಗಂಟೆಗೆ ಸಿದ್ದರಾಮಯ್ಯ ತನಿಖೆಗೆ ಹೋಗಿದ್ದಾರೆ. ಎರಡು ತಾಸಿಗೆ ವಿಚಾರಣೆ ಮುಗಿದು ಹೋಗುತ್ತದೆ. ಇದು ಪೂರ್ವನಿರ್ಧಾರಿತವಾಗಿದೆ ಎಂದು ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.

ಈ ವಿಚಾರಣೆಯಿಂದ ಸತ್ಯ ಹೊರಗೆ ಬರುವುದು ಸಾಧ್ಯವೇ ಇಲ್ಲ. ಅವರೇ ಸ್ಕ್ರಿಪ್ಟ್ ಬರೆದುಕೊಟ್ಟು ಇವರೇ ಉತ್ತರ ಕೊಟ್ಟು ಹೀಗೇ ಕೇಳಬೇಕು ಎಂದು ಇವರೇ ಹೇಳಿಕೊಟ್ಟಿದ್ದಾರೆ. ಇಷ್ಟೇ ಪ್ರಶ್ನೆ ಕೇಳ್ತಾರೆ, ಇಷ್ಟೇ ಸಮಯಕ್ಕೆ ಮುಗಿಯುತ್ತದೆ ಎಂಬುದು ಮೊದಲೇ ಸಿದ್ದರಾಮಯ್ಯಗೆ ಗೊತ್ತಾ? ಇದೆಲ್ಲ ಸ್ಟೆಜ್ ಮ್ಯಾನೇಜ್ಡ್ ವಿಚಾರಣೆ. ನಿಮ್ಮನ್ನು ಕಂಡು ಲೋಕಾ ಅಧಿಕಾರಿಗಳಿಗೆ ಭಯ ಬಂದಿರಬೇಕು. ಎಲ್ಲರ ಬಗ್ಗೆಯೂ ಮಾತನಾಡುವ ಸಿಎಂ ನೀವು ಮಾತ್ರ ಹೇಗೆ ಅಧಿಕಾರದಲ್ಲಿ ಇರ್ತೀರಿ? ನಾಗೇಂದ್ರನನ್ನು ಜೈಲಿಗೂ ಕಳಿಸಿದ್ರಿ, ರಾಜೀನಾಮೆ ಪಡೆದು ಕೆಳಗೆ ಇಳಿಸಿದ್ದೀರಿ ಎಂದು ಗುಡುಗಿದರು.  

ಲೋಕಾ ಅಧಿಕಾರಿಗಳು ನಿಮ್ಮನ್ನು ಪ್ರಶ್ನೆ ಮಾಡುವುದಕ್ಕೆ ಸಾಧ್ಯ ಇಲ್ಲ. ವಿಚಾರಣೆಗೆ ಬರಲಿಲ್ಲ ಅಂತ ಅನಿಸಿಕೊಳ್ಳಬಾರದು ಎಂದು ಹೋಗಿದ್ದಾರೆ. ಇದು ಪೂರ್ವನಿರ್ಧಾರಿತ ಎಂದು ನಿಮ್ಮ ಟಿಪಿ ನೋಡಿದರೆ ಗೊತ್ತಾಗುತ್ತದೆ. ಕೋರ್ಟ್‌ಗೂ ನಾವು ಹೋಗುತ್ತೇವೆ. ಸಿಎಂ ದೋಖಾ ಮಾಡುತ್ತಿದ್ದಾರೆ, ರಾಜ್ಯದ ಜನರಿಗೆ ವಂಚನೆ ಮಾಡುತ್ತಿದ್ದಾರೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments