ಮುಡಾ ಕೇಸ್ ಗೆ ಕೇರ್ ಮಾಡಿಲ್ಲ ಎಂದು ತೋರಿಸಿಕೊಳ್ಳಲು ವಿಶಲ್ ಹಾಕುತ್ತಾ ವಿಧಾನಸೌಧಕ್ಕೆ ಬಂದ ಸಿದ್ದರಾಮಯ್ಯ

Krishnaveni K
ಗುರುವಾರ, 22 ಆಗಸ್ಟ್ 2024 (14:21 IST)
ಬೆಂಗಳೂರು: ಮುಡಾ ಸೈಟು ಹಗರಣದಲ್ಲಿ ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರೂ ತಾವು ಕೇರ್ ಮಾಡಿಲ್ಲ ಎಂಬಂತೆ ತೋರಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಇಂದು ವಿಧಾನಸೌಧಕ್ಕೆ ವಿಶಲ್ ಹೊಡೆಯುತ್ತಾ ಬಂದಿದ್ದಾರೆ.

ರಾಜ್ಯಪಾಲರು ತಮ್ಮ ವಿರುದ್ಧ ತನಿಖೆಗೆ ಅನುಮತಿಸುತ್ತಿದ್ದಂತೇ ಸಿದ್ದರಾಮಯ್ಯ ಕೊಂಚ ಗಲಿಬಿಲಿಯಾಗಿದ್ದರು. ಅಧಿಕಾರಿಗಳ ಜೊತೆ, ಕಾನೂನು ತಜ್ಞರ ಜೊತೆ ಸತತ ಮೀಟಿಂಗ್ ನಡೆಸಿ ಪ್ರಕರಣದಿಂದ ತಪ್ಪಿಸಿಕೊಳ್ಳಲು ಯಾವ ದಾರಿಯಿದೆ ಎಂದು ನೋಡಿಕೊಂಡಿದ್ದರು. ಆದರೆ ಇಂದು ಮಾಧ್ಯಮಗಳ ಎದುರು ಬಂದ ಸಿದ್ದರಾಮಯ್ಯ ಕೊಂಚ ನಿರಾಳವಾಗಿದ್ದುದು ಕಂಡುಬಂದಿದೆ.

ಇಂದು ವಿಧಾನಸೌಧಕ್ಕೆ ತಮ್ಮ ಸಂಗಡಿಗರ ಜೊತೆ ಬಂದ ಸಿದ್ದರಾಮಯ್ಯ ವಿಶಲ್ ಹೊಡೆಯುತ್ತಾ ನಗು ನಗುತ್ತಾ ತಾವು ಆರಾಮವಾಗಿರುವುದಾಗಿ ಮಾಧ್ಯಮಗಳ ಮುಂದೆ ತೋರಿಸಿಕೊಂಡಿದ್ದಾರೆ. ಕೇವಲ ಶಿಳ್ಳೆ ಮಾತ್ರವಲ್ಲ, ತಮ್ಮ ಪಕ್ಕದಲ್ಲಿದ್ದವರ ಮುಂದೆ ಗತ್ತು ತೋರುತ್ತಾ, ಹೆಗಲ ಮೇಲೆ ಕೈ ಹಾಕಿಕೊಂಡು ನಡೆದಾಡಿದ್ದಾರೆ.

ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಪರವಾಗಿ ಇಡೀ ಸಚಿವ ಸಂಪುಟವೇ ನಿಂತಿದೆ. ನಾಳೆ ದೆಹಲಿಗೆ ತೆರಳಿ ಅವರು ಪ್ರಕರಣದ ಬಗ್ಗೆ ವರಿಷ್ಠರಿಗೆ ವಿವರಣೆ ನೀಡಲಿದ್ದಾರೆ. ತಮ್ಮ ಬೆನ್ನಿಗೆ ಪಕ್ಷ ನಿಂತಿರುವುದರಿಂದ ಸಿದ್ದರಾಮಯ್ಯ ನಿರಾಳವಾಗಿರುವಂತೆ ಕಾಣುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತಷ್ಟು ಕಳಪೆ ಮಟ್ಟಕ್ಕೆ ಇಳಿದ ವಾಯು ಗುಣಮಟ್ಟ

ಮುಂದಿನ ಸುದ್ದಿ
Show comments