Webdunia - Bharat's app for daily news and videos

Install App

ಮುಡಾ ಕೇಸ್ ಗೆ ಕೇರ್ ಮಾಡಿಲ್ಲ ಎಂದು ತೋರಿಸಿಕೊಳ್ಳಲು ವಿಶಲ್ ಹಾಕುತ್ತಾ ವಿಧಾನಸೌಧಕ್ಕೆ ಬಂದ ಸಿದ್ದರಾಮಯ್ಯ

Krishnaveni K
ಗುರುವಾರ, 22 ಆಗಸ್ಟ್ 2024 (14:21 IST)
ಬೆಂಗಳೂರು: ಮುಡಾ ಸೈಟು ಹಗರಣದಲ್ಲಿ ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರೂ ತಾವು ಕೇರ್ ಮಾಡಿಲ್ಲ ಎಂಬಂತೆ ತೋರಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಇಂದು ವಿಧಾನಸೌಧಕ್ಕೆ ವಿಶಲ್ ಹೊಡೆಯುತ್ತಾ ಬಂದಿದ್ದಾರೆ.

ರಾಜ್ಯಪಾಲರು ತಮ್ಮ ವಿರುದ್ಧ ತನಿಖೆಗೆ ಅನುಮತಿಸುತ್ತಿದ್ದಂತೇ ಸಿದ್ದರಾಮಯ್ಯ ಕೊಂಚ ಗಲಿಬಿಲಿಯಾಗಿದ್ದರು. ಅಧಿಕಾರಿಗಳ ಜೊತೆ, ಕಾನೂನು ತಜ್ಞರ ಜೊತೆ ಸತತ ಮೀಟಿಂಗ್ ನಡೆಸಿ ಪ್ರಕರಣದಿಂದ ತಪ್ಪಿಸಿಕೊಳ್ಳಲು ಯಾವ ದಾರಿಯಿದೆ ಎಂದು ನೋಡಿಕೊಂಡಿದ್ದರು. ಆದರೆ ಇಂದು ಮಾಧ್ಯಮಗಳ ಎದುರು ಬಂದ ಸಿದ್ದರಾಮಯ್ಯ ಕೊಂಚ ನಿರಾಳವಾಗಿದ್ದುದು ಕಂಡುಬಂದಿದೆ.

ಇಂದು ವಿಧಾನಸೌಧಕ್ಕೆ ತಮ್ಮ ಸಂಗಡಿಗರ ಜೊತೆ ಬಂದ ಸಿದ್ದರಾಮಯ್ಯ ವಿಶಲ್ ಹೊಡೆಯುತ್ತಾ ನಗು ನಗುತ್ತಾ ತಾವು ಆರಾಮವಾಗಿರುವುದಾಗಿ ಮಾಧ್ಯಮಗಳ ಮುಂದೆ ತೋರಿಸಿಕೊಂಡಿದ್ದಾರೆ. ಕೇವಲ ಶಿಳ್ಳೆ ಮಾತ್ರವಲ್ಲ, ತಮ್ಮ ಪಕ್ಕದಲ್ಲಿದ್ದವರ ಮುಂದೆ ಗತ್ತು ತೋರುತ್ತಾ, ಹೆಗಲ ಮೇಲೆ ಕೈ ಹಾಕಿಕೊಂಡು ನಡೆದಾಡಿದ್ದಾರೆ.

ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಪರವಾಗಿ ಇಡೀ ಸಚಿವ ಸಂಪುಟವೇ ನಿಂತಿದೆ. ನಾಳೆ ದೆಹಲಿಗೆ ತೆರಳಿ ಅವರು ಪ್ರಕರಣದ ಬಗ್ಗೆ ವರಿಷ್ಠರಿಗೆ ವಿವರಣೆ ನೀಡಲಿದ್ದಾರೆ. ತಮ್ಮ ಬೆನ್ನಿಗೆ ಪಕ್ಷ ನಿಂತಿರುವುದರಿಂದ ಸಿದ್ದರಾಮಯ್ಯ ನಿರಾಳವಾಗಿರುವಂತೆ ಕಾಣುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments