Webdunia - Bharat's app for daily news and videos

Install App

ವಕ್ಫ್ ಬೋರ್ಡ್ ಮುಸ್ಲಿಮರದ್ದು, ಹಿಂದೂ ದೇವಾಲಯದ ಹುಂಡಿಗೆ ನೀವು ಕೈ ಹಾಕಬಹುದಾ ಸಿದ್ದರಾಮಯ್ಯ

Krishnaveni K
ಶುಕ್ರವಾರ, 9 ಆಗಸ್ಟ್ 2024 (10:05 IST)
ಬೆಂಗಳೂರು: ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿರುವ ವಕ್ಫ್ ಬೋರ್ಡ್ ಮಸೂದೆ ಬಗ್ಗೆ ಪ್ರತಿಕ್ರಿಯಿಸಿದ್ದ ಸಿಎಂ ಸಿದ್ದರಾಮಯ್ಯ ಅದು ಮುಸ್ಲಿಮರ ವೈಯಕ್ತಿಕ ಕಾನೂನು, ಅವರ ಧರ್ಮಕ್ಕೆ ಸಂಬಂಧಿಸಿದ ವಿಚಾರದಲ್ಲಿ ಕೇಂದ್ರ ತಲೆತೂರಿಸಬಾರದು ಎಂದು ಹೇಳಿಕೆ ನೀಡಿದ್ದರು.

ಅವರ ಈ ಹೇಳಿಕೆ ಹಿಂದೂಗಳನ್ನು ಕೆರಳಿಸಿದೆ. ವಕ್ಫ್ ಬೋರ್ಡ್ ಕುರಿತಂತೆ ನಿನ್ನೆ ಕೇಂದ್ರದ ಎನ್ ಡಿಎ ಸರ್ಕಾರ ಕಾನೂನಿಗೆ ತಿದ್ದುಪಡಿ ತರುವ ಹೊಸ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿತ್ತು. ಇದಕ್ಕೆ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದವು. ವಕ್ಫ್ ಬೋರ್ಡ್ ನ ಅಧಿಕಾರ ವ್ಯಾಪ್ತಿಗೆ ಕತ್ತರಿ ಹಾಕುವ ಮಸೂದೆ ಇದಾಗಿತ್ತು.

ಬೇಕಾಬಿಟ್ಟಿ ಆಸ್ತಿ ಕಬಳಿಕೆ ಮಾಡುವಂತಿಲ್ಲ. ಇದಕ್ಕೆ ಇನ್ನು ಮುಂದೆ ಕೆಲವು ತಿದ್ದುಪಡಿ ತರಲಾಗುವುದಾಗಿ ಮಸೂದೆಯಲ್ಲಿ ಹೇಳಲಾಗಿದೆ. ಇದರ ಬಗ್ಗೆ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ. ಈ ವಿಚಾರವಾಗಿ ಸಿದ್ದರಾಮಯ್ಯ ಕೂಡಾ ಪ್ರತಿಕ್ರಿಯಿಸಿದ್ದರು. ಕೇಂದ್ರ ಸರ್ಕಾರ ಅಲ್ಪ ಸಂಖ್ಯಾತರ ವಿರೋಧಿ. ಅದಕ್ಕೇ ವಕ್ಫ್ ಬೋರ್ಡ್ ವಿಚಾರದಲ್ಲಿ ತಿದ್ದುಪಡಿ ಮಾಡುತ್ತಿದೆ. ವಕ್ಫ್ ಬೋರ್ಡ್ ಆ ಸಮುದಾಯದ ಕಾನೂನು. ಅದರಲ್ಲಿ ನಾವು ತಲೆ ಹಾಕಬಾರದು ಎಂದು ಸಿದ್ದರಾಮಯ್ಯ ಹೇಳಿದ್ದರು.

ಇದಕ್ಕೆ ನೆಟ್ಟಿಗರು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಕ್ಫ್ ಬೋರ್ಡ್ ಮುಸ್ಲಿಮರದ್ದು. ಅವರ ಧರ್ಮದ ವಿಚಾರದಲ್ಲಿ ನಾವು ತಲೆ ಹಾಕಬಾರದು. ಆದರೆ ಹಿಂದೂಗಳ ದೇವಾಲಯದ ಹುಂಡಿಗೆ ನೀವು ಕೈ ಹಾಕಬಹುದೇ? ಹಿಂದೂ ದೇವಾಲಯಗಳ ಮೇಲೆ ಯಾಕೆ ಸರ್ಕಾರಗಳ ನಿಯಂತ್ರಣ ಎಂದು ನೆಟ್ಟಿಗರು ಸಿದ್ದರಾಮಯ್ಯ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

ಮುಂದಿನ ಸುದ್ದಿ
Show comments