ಮೇಲ್ಜಾತಿಗಳನ್ನು ತುಳಿಯಲು ಜಾತಿಗಣತಿ ಎಂದ ಸೋಮಣ್ಣಗೆ ಸಮಾಜ ವಿರೋಧಿ ಎಂದ ಸಿದ್ದರಾಮಯ್ಯ

Krishnaveni K
ಸೋಮವಾರ, 6 ಅಕ್ಟೋಬರ್ 2025 (15:08 IST)
ಬೆಂಗಳೂರು: ಮೇಲ್ಜಾತಿಗಳನ್ನು ತುಳಿಯುವ ಸಲುವಾಗಿ ಜಾತಿಗಣತಿ ಮಾಡಲಾಗುತ್ತಿದೆ ಎಂಬ ಕೇಂದ್ರ ಸಚಿವ ವಿ ಸೋಮಣ್ಣ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದು ಅವರು ಸಮಾಜ ವಿರೋಧಿ ಎಂದಿದ್ದಾರೆ.

ಮೇಲ್ಜಾತಿ ಅಥವಾ ಯಾವುದೋ ಜಾತಿಯವರನ್ನು ತುಳಿಯುವ ಸಲುವಾಗಿ ಈ ಅಸಹ್ಯ ಗಣತಿ ಮಾಡುತ್ತಿದ್ದಾರೆ. ಸಮೀಕ್ಷೆ ಬಗ್ಗೆ ಅಧಿಕಾರಿಗಳಿಗೇ ಸರಿಯಾದ ಮಾಹಿತಿಯಿಲ್ಲ.  ಈ ಸಮೀಕ್ಷೆ ವರ್ಷವಾದರೂ ಮುಗಿಯಲ್ಲ ಎಂದು ಸೋಮಣ್ಣ ಟೀಕಿಸಿದ್ದರು.

ಇದಕ್ಕೆ ತಿರುಗೇಟು ನೀಡಿರುವ ಸಿದ್ದರಾಮಯ್ಯ ‘ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಸೋಮಣ್ಣ ಅವರ ಆರೋಪ ಬಾಲಿಶವಾದುದ್ದು. ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ನಡೆಸದಿದ್ದರೆ, ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ. ಈ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜ ನಿರ್ಮಾಣವನ್ನು ವಿರೋಧಿಸುವವರು ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ. ಈಗಾಗಲೇ 1.10 ಕೋಟಿ ಕುಟುಂಬಗಳ ಸಮೀಕ್ಷಾ ಕಾರ್ಯ ಮುಗಿದಿದ್ದು, ನಿನ್ನೆವರೆಗೆ ಶೇ.63 ರಷ್ಟು ಸರ್ವೇ ಕಾರ್ಯ ಪ್ರಗತಿಯಾಗಿದೆ. ನಾಳೆ ಸಂಜೆವರೆಗೆ ಸಮೀಕ್ಷೆಯ ಪ್ರಗತಿಯನ್ನು ಪರಿಶೀಲಿಸಿ, ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಮಾಧ್ಯಮಗಳ ಮುಂದೆ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಆದಲ್ಲಿ ಸಿದ್ದರಾಮಯ್ಯ ಸ್ಥಾನಕ್ಕೆ ಜಿ ಪರಮೇಶ್ವರ್ ಸೂಕ್ತ: ಕೆಎನ್ ರಾಜಣ್ಣ

ಇಂಧನ ದರ ಏರಿಕೆ ಬಿಸಿ ಬೆನ್ನಲ್ಲೇ ಗ್ರಾಹಕರಿಗೆ ಅಕ್ಕಿ ಬೆಲೆಯಲ್ಲಿ ಬಿಗ್ ಶಾಕ್

ಪ್ರಧಾನಿ ನರೇಂದ್ರ ಮೋದಿಗೆ ನಾರ್ವೇಯ ಅತ್ಯುನ್ನತ ನಾಗರಿಕ ಗೌರವ

ರಾಹುಲ್ ಗಾಂಧಿಯನ್ನು ಪ್ರಧಾನಿಯನ್ನಾಗಿ ಮಾಡುವುದು ಕೈ ನಾಯಕರ ಗುರಿ: ರೇವಂತ್ ರೆಡ್ಡಿ

ಜೆಡಿಎಸ್‌ ಬಿಜೆಪಿ ಸಂಬಂಧ ತುಂಬಾ ಚೆನ್ನಾಗಿದೆ: ಎಚ್ ಡಿ ದೇವೇಗೌಡ

ಮುಂದಿನ ಸುದ್ದಿ
Show comments