ಐದು ವರ್ಷವೂ ನನ್ನ ತಂದೆಯವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

Krishnaveni K
ಶುಕ್ರವಾರ, 29 ನವೆಂಬರ್ 2024 (12:14 IST)
ಬೆಂಗಳೂರು: ವಿಪಕ್ಷಗಳು ಏನೇ ಆರೋಪ ಮಾಡಿದರೂ, ತನಿಖಾ ಸಂಸ್ಥೆಗಳನ್ನು ಛೂ ಬಿಟ್ಟರೂ ಐದು ವರ್ಷವೂ ನನ್ನ ತಂದೆಯವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಸಿದ್ದರಾಮಯ್ಯ ಪುತ್ರ ಡಾ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಸ್ವಾಭಿಮಾನ ಸಮಾವೇಶದ ಮೇಲ್ವಿಚಾರಣೆ ಮಾಡಲು ಬಂದಿದ್ದಾಗ ಮಾಧ್ಯಮಗಳ ಮುಂದೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ‘ಈಗಷ್ಟೇ ಉಪಚುನಾವಣೆ ಗೆದ್ದಿದ್ದೇವೆ. ನಮಗೆ ಜನ ಬೆಂಬಲವಿದೆ. ಜನ ಬೆಂಬಲವಿದೆ ಎಂದ ಮೇಲೆ ನಾವು ಐದು ವರ್ಷ ಕಂಪ್ಲೀಟ್ ಮಾಡಿಯೇ ಮಾಡುತ್ತೇವೆ’ ಎಂದಿದ್ದಾರೆ.

ಇನ್ನು ತಮ್ಮ ಕುಟುಂಬದ ವಿರುದ್ಧ ಹೊರಿಸಲಾಗಿರುವ ಮುಡಾ ಹಗರಣದ ಬಗ್ಗೆ ಮಾತನಾಡಿರುವ ಯತೀಂದ್ರ ‘ನನ್ನ ತಂದೆ, ತಾಯಿ, ಸೋದರಮಾವನ ಮೇಲೆ ಭ್ರಷ್ಟಾಚಾರ ಆರೋಪ ಮಾಡಲಾಗಿದೆ. ಆದರೆ ಇದರಲ್ಲಿ ಯಾವುದೇ ಹುರುಳಿಲ್ಲ. ಇದು ವಿಪಕ್ಷಗಳಿಗೂ, ತನಿಖಾ ಸಂಸ್ಥೆಯವರಿಗೂ ಗೊತ್ತಿದೆ. ಆದರೂ ವಿನಾಕಾರಣ ಒಂದೊಂದು ನೆಪ ಮಾಡಿಕೊಂಡು ತನಿಖೆ ಮಾಡಲು ಬರುತ್ತಿದ್ದಾರಷ್ಟೇ’ ಎಂದಿದ್ದಾರೆ.

ಇನ್ನು ಕೇಂದ್ರ ತನಿಖಾ ಸಂಸ್ಥೆಗಳ ಮೇಲೆ ನಮಗೆ ನಂಬಿಕೆಯಿಲ್ಲ. ಹೀಗಾಗಿ ಮುಡಾದಲ್ಲಿ ನಡೆದಿದೆ ಎನ್ನಲಾದ 50:50 ಅನುಪಾತದಡಿಯಲ್ಲಿರುವ ಸೈಟುಗಳ ಅಕ್ರಮದ ಬಗ್ಗೆ ನಾವೇ ಒಂದು ತನಿಖಾ ತಂಡ ರಚಿಸಿ ತನಿಖೆ ನಡೆಸುತ್ತಿದ್ದೇವೆ ಎಂದು ಯತೀಂದ್ರ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಆಡಳಿತದಲ್ಲಿ ನಕ್ಸಲಸಿಂ ಕೊನೆಯುಸಿರೆಳೆಯುತ್ತಿದೆ: ಅಮಿತ್ ಶಾ

ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

ದೋಣಿಯೊಳಗೆ ಹಾರಿ ಬಂದು ದೊಡ್ಡ ಮೀನು ಚುಚ್ಚಿ ಮೀನುಗಾರಿಕೆಗೆ ತೆರಳಿದ್ದ ಯುವಕ ಸಾವು

ಒನ್ ಸೈಡ್ ಲವ್‌ಗೆ ನೋ ಎಂದ ವಿದ್ಯಾರ್ಥಿನಿಯನ್ನೇ ಮುಗಿಸಿದ ಪ್ರಿಯಕರ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಮುಂದಿನ ಸುದ್ದಿ
Show comments