Webdunia - Bharat's app for daily news and videos

Install App

ಹಿಂದೂ ಧರ್ಮದಲ್ಲಿ ಸಮಾನತೆ ಇಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಭಾರೀ ಆಕ್ರೋಶ

Krishnaveni K
ಸೋಮವಾರ, 15 ಸೆಪ್ಟಂಬರ್ 2025 (08:36 IST)
ಬೆಂಗಳೂರು: ಹಿಂದೂ ಧರ್ಮದಲ್ಲಿ ಸಮಾನತೆ ಇದ್ದಿದ್ದರೆ ಜನ ಮತಾಂತರ ಯಾಕೆ ಆಗುತ್ತಿದ್ದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಕ್ಕೆ ಈಗ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳಿಂದ ಭಾರೀ ವಿರೋಧ ವ್ಯಕ್ತವಾಗುತ್ತಿದೆ.

ಜಾತಿ ಗಣತಿ ಸಮೀಕ್ಷೆಯಲ್ಲಿ ಕ್ರಿಶ್ಚಿಯನ್ ಧರ್ಮದಲ್ಲಿ ಹಿಂದೂ ಉಪಜಾತಿಗಳನ್ನು ಸೇರಿಸಿರುವುದಕ್ಕೆ ವಿರೋಧ ವ್ಯಕ್ತವಾಗಿತ್ತು. ಮತಾಂತರದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡುವಾಗ ಸಿಎಂ ಸಿದ್ದರಾಮಯ್ಯ ಹಿಂದೂ ಧರ್ಮದಲ್ಲಿ ಸಮಾನ ಅವಕಾಶಗಳಿದ್ದರೆ ಜನ ಯಾಕೆ ಮತಾಂತರಗೊಳ್ಳುತ್ತಿದ್ದರು ಎಂದು ಪ್ರಶ್ನೆ ಮಾಡಿದ್ದರು.

ಆದರೆ ಸಿಎಂ ಹೇಳಿಕೆಗೆ ತೀವ್ರವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕರು ಈ ಹೇಳಿಕೆ ಮೂಲಕ ಸಿದ್ದರಾಮಯ್ಯನವರೇ ಪರೋಕ್ಷವಾಗಿ ಮತಾಂತರವನ್ನು ಪ್ರಚೋದಿಸುತ್ತಿದ್ದಾರೆ ಎಂದಿದ್ದಾರೆ. ಆರ್ ಅಶೋಕ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಸಿಎಂಗೆ ಧೈರ್ಯವಿದ್ದರೆ ಮುಸ್ಲಿಮ್ ಧರ್ಮದಲ್ಲಿರುವ ಅಸಮಾನತೆ ಬಗ್ಗೆ ಪ್ರಶ್ನಿಸಲಿ ಎಂದಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲೂ ಈ ಬಗ್ಗೆ ಸಾಕಷ್ಟು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಈ ಹೇಳಿಕೆಯಿಂದ ಹಿಂದೂಗಳಲ್ಲೇ ಜಾತಿ ನಡುವೆ ಒಡಕು ಉಂಟು ಮಾಡಲಿದೆ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments