ಎರಡು ಮಹತ್ವದ ನಿರ್ಧಾರದೊಂದಿಗೆ ಕಾರ್ಯಾಚರಣೆ ಶುರು ಮಾಡಿದ ಸಿಎಂ ಸಿದ್ದರಾಮಯ್ಯ ಬಣ

Krishnaveni K
ಬುಧವಾರ, 24 ಡಿಸೆಂಬರ್ 2025 (10:29 IST)
ಬೆಂಗಳೂರು: ಎರಡು ಮಹತ್ವದ ನಿರ್ಧಾರ ಕೈಗೊಂಡಿರುವ ಸಿಎಂ ಸಿದ್ದರಾಮಯ್ಯ ಬೆಂಬಲಿಗರು ಕಾರ್ಯಾಚರಣೆ ಶುರು ಮಾಡಿದ್ದಾರೆ.

ರಾಜ್ಯದಲ್ಲಿ ಅಧಿಕಾರ ಹಂಚಿಕೆ ಕದನ ಇನ್ನೂ ಚಾಲ್ತಿಯಲ್ಲಿದೆ. ಡಿಕೆ ಶಿವಕುಮಾರ್ ಬಣ ಇನ್ನಿಲ್ಲದಂತೆ ಪ್ರಯತ್ನ ಪಡುತ್ತಿದ್ದಾರೆ. ಇದರ ನಡುವೆ ಇದೇ ವಾರ ದೆಹಲಿಯಲ್ಲಿ ಎಐಸಿಸಿ ಕಾರ್ಯಕಾರಿಣಿ ನಡೆಯಲಿದ್ದು, ಈ ವೇಳೆ ರಾಹುಲ್ ಗಾಂಧಿಯವರನ್ನು ರಾಜ್ಯ ನಾಯಕರು ಭೇಟಿ ಮಾಡುವ ಸಾಧ್ಯತೆಯಿದೆ.

ಇದರ ನಡುವೆ ಸಿದ್ದರಾಮಯ್ಯ ಬುಲಾವ್ ನೀಡದೇ ಹೈಕಮಾಂಡ್ ನಾಯಕರನ್ನು ಭೇಟಿಯಾಗದೇ ಇರಲು ತೀರ್ಮಾನಿಸಿದ್ದಾರೆ. ಆದರೆ ಅವರ ಬೆಂಬಲಿಗರು ಮಾತ್ರ ಯಾವುದೇ ಕಾರಣಕ್ಕೂ ಸಿಎಂ ಸ್ಥಾನ ಕೈ ತಪ್ಪದಂತೆ ಯೋಜನೆ ರೂಪಿಸಿದ್ದಾರೆ.

ರಾಜ್ಯದಲ್ಲಿ ಅಹಿಂದ ಸಮಾವೇಶಕ್ಕೆ ಸಿದ್ಧತೆ ನಡೆಸಿದ್ದಾರೆ. ಈ ಸಮಾವೇಶವನ್ನು ಎರಡು ಉದ್ದೇಶ ಇಟ್ಟುಕೊಂಡು ಮಾಡಲಾಗುತ್ತಿದೆ. ಒಂದು ವೇಳೆ ಸಿದ್ದರಾಮಯ್ಯಗೆ ಸಿಎಂ ಸ್ಥಾನ ಕೈ ತಪ್ಪಿದರೆ ಇದೇ ಸಮಾವೇಶವನ್ನು ಹೋರಾಟವಾಗಿಸುವ ಉದ್ದೇಶ ಬೆಂಬಲಿಗರಿಗಿದೆ. ಇಲ್ಲವೇ ಸಿದ್ದರಾಮಯ್ಯ ಅವರ ಪರವಾಗಿ ಬೃಹತ್ ಸಮಾವೇಶ ನಡೆಸುವ ಉದ್ದೇಶ ಹೊಂದಿದ್ದಾರೆ. ಈ ಮೂಲಕ ಹೈಕಮಾಂಡ್ ಗೆ ಎಚ್ಚರಿಕೆಯ ಸಂದೇಶ ರವಾನಿಸಲು ಹೊರಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವ ಮೊದಲು ಈ ಒಂದು ಕೆಲಸ ಮಾಡಲಿದ್ದಾರೆ ಸಿದ್ದರಾಮಯ್ಯ

ಸಿದ್ದರಾಮಯ್ಯ ಬಳಿ ರಾಜೀನಾಮೆ ಕೇಳಲು ರಾಹುಲ್ ಗಾಂಧಿ ಮನವೊಲಿಸಿದ ವ್ಯಕ್ತಿ ಯಾರೆಂದು ಬಯಲು

ಸಿಎಂ ಸ್ಥಾನಕ್ಕೆ ರಾಜೀನಾಮೆ ಸುದ್ದಿ ಬೆನ್ನಲ್ಲೇ ಇಂದು ಸಿದ್ದರಾಮಯ್ಯ, ಡಿಕೆಶಿ ಒಂದೇ ವೇದಿಕೆಯಲ್ಲಿ

Karnataka Weather: ಇಂದು ಯಾವ ಜಿಲ್ಲೆಗಳಲ್ಲಿ ಮಳೆ, ತಪ್ಪದೇ ಗಮನಿಸಿ

ಕರ್ನಾಟಕ ಸಿಎಂ ಬದಲಾವಣೆಗೆ ಬಿಗ್ ಟ್ವಿಸ್ಟ್: ರಾಜೀನಾಮೆಗೆ ಸಿದ್ದರಾಮಯ್ಯ ನಿರ್ಧಾರ?

ಮುಂದಿನ ಸುದ್ದಿ
Show comments