Webdunia - Bharat's app for daily news and videos

Install App

ಮುಡಾ ಟೆನ್ಷನ್ ನಡುವೆ ಸಿಎಂ ಸಿದ್ದರಾಮಯ್ಯ ದೇವರ ಮೇಲೆ ಭಕ್ತಿ ಹೆಚ್ಚಾಯ್ತು: ಕುಂಕುಮ ಇಟ್ಟರೂ ಚಕಾರವಿಲ್ಲ

Krishnaveni K
ಮಂಗಳವಾರ, 3 ಸೆಪ್ಟಂಬರ್ 2024 (14:29 IST)
ಮೈಸೂರು: ಮುಡಾ ಹಗರಣ ಸಂಕಷ್ಟ ಸಿಎಂ ಸಿದ್ದರಾಮಯ್ಯರನ್ನು ಕೊಂಚ ಅಲುಗಾಡಿಸಿದೆ ಎನ್ನುವುದು ಅವರ ಇತ್ತೀಚೆಗಿನ ವರ್ತನೆ ಸಾಬೀತುಪಡಿಸುತ್ತಿದೆ. ಕಳೆದ 25 ದಿನಗಳಲ್ಲಿ ಇದು ಎರಡನೇ ಬಾರಿಗೆ ಸಿಎಂ ಚಾಮುಂಡಿ ತಾಯಿಯ ದರ್ಶನ ಪಡೆದಿದ್ದಾರೆ.

ಸಾಮಾನ್ಯವಾಗಿ ಸಿದ್ದರಾಮಯ್ಯ ದೇವಾಲಯಗಳಿಗೆ ಭೇಟಿ ಕೊಡುವುದು ಅಪರೂಪ. ಒಂದು ವೇಳೆ ಹೋದರೂ ಉಪವಾಸವಿದ್ದು ಹೋಗುವುದು, ಸಾತ್ವಿಕ ಆಹಾರ ಸೇವಿಸಿ ಹೋಗಬೇಕು, ಕುಂಕುಮ ಇಡಬೇಕು ಇತ್ಯಾದಿ ನಿಯಮಗಳನ್ನೆಲ್ಲಾ ಪಾಲಿಸುವವರೇ ಅಲ್ಲ. ದೇವಾಲಯಗಳಿಗೆ ಹೋದರೂ ಅಲ್ಲೇನೂ ವಿಶೇಷ ಸೇವೆ ಮಾಡುವುದಿಲ್ಲ.

ಆದರೆ ಈಗ ಮುಡಾ ಸಂಕಷ್ಟ ಎದುರಾದ ಮೇಲೆ ಸಂಕಟ ಬಂದರೆ ವೆಂಕಟರಮಣ ಎಂಬಂತಾಗಿದೆ ಸಿಎಂ ಸ್ಥಿತಿ. ಕಳೆದ 25 ದಿನಗಳ ಅವಧಿಯಲ್ಲಿ ಇದು ಎರಡನೇ ಬಾರಿಗೆ ಸಿಎಂ ಮೈಸೂರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಅದರಲ್ಲೂ ಇಂದಂತೂ ಅರ್ಚಕರು ಹಣೆಗೆ ಕುಂಕುಮ ಇಡುವಾಗಲೂ ಎಂದಿನಂತೆ ಬೇಡ ಎನ್ನದೇ ಮಾತನಾಡದೇ ಹಾಕಿಸಿಕೊಂಡಿದ್ದಾರೆ.

ಅಷ್ಟೇ ಅಲ್ಲ, ದೇವಿಗೆ ಪೂಜೆ ಬಳಿಕ ಹೊರಗೆ ಬಂದು ಈಡುಗಾಯಿಯನ್ನೂ ಒಡೆದಿದ್ದಾರೆ. ಸಿದ್ದರಾಮಯ್ಯ ಇಂತಹದ್ದೆನ್ನೆಲ್ಲಾ ಮಾಡುವುದನ್ನು ನೋಡುವುದೇ ಅಪರೂಪ. ಆದರೆ ಈಗ ಮುಡಾ ಸಂಕಷ್ಟ ಕುತ್ತಿಗೆವರೆಗೆ ಬಂದಿದ್ದು, ತಮ್ಮ ಸ್ಥಾನಕ್ಕೇ ಕುತ್ತು ಬಂದಿದೆ. ಹೀಗಾಗಿ ದೇವರ ಮೇಲಿನ ಭಕ್ತಿಯೂ ಹೆಚ್ಚಾಗಿದೆ ಎನ್ನಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments