Publish Date: Fri, 29 May 2026 (12:56 IST)
Updated Date: Fri, 29 May 2026 (13:04 IST)
ನವದೆಹಲಿ: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ದೆಹಲಿಗೆ ತೆರಳಿರುವ ಸಿದ್ದರಾಮಯ್ಯ ಸೋನಿಯಾ ಗಾಂಧಿ ನಿವಾಸಕ್ಕೆ ಭೇಟಿ ನೀಡಿದ್ದಾರೆ.
ಮೊನ್ನೆ ರಾಹುಲ್ ಗಾಂಧಿ ಸೂಚನೆ ಮೇರೆಗೆ ಸಿದ್ದರಾಮಯ್ಯ ತಮ್ಮ ಸುದೀರ್ಘ ಅವಧಿಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದರು. ನಿನ್ನೆ ಅವರು ಅಧಿಕೃತವಾಗಿ ಲೋಕಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದರು.
ಇದಾದ ಬಳಿಕ ಸಂಜೆ ಅವರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ದೆಹಲಿಗೆ ತೆರಳಿದ್ದಾರೆ. ದೆಹಲಿಯಲ್ಲಿ ಅವರು ಇಂದು ಸೋನಿಯಾ ಗಾಂಧಿಯನ್ನು ಭೇಟಿ ಮಾಡಿದ್ದಾರೆ. ಸಚಿವ ಕೆಜೆ ಜಾರ್ಜ್ ಜೊತೆ ಅವರು ಇಂದು 10 ಜನಪತ್ ನಲ್ಲಿರುವ ಸೋನಿಯಾ ನಿವಾಸಕ್ಕೆ ಬಂದಿದ್ದಾರೆ.
ಬಳಿಕ ತಮಗೆ ಇಷ್ಟು ದಿನ ಅವಕಾಶ ನೀಡಿರುವುದಕ್ಕೆ, ಬೆಂಬಲಿಸಿರುವುದಕ್ಕೆ ಸೋನಿಯಾ ಗಾಂಧಿಗೆ ಧನ್ಯವಾದ ಸಲ್ಲಿಸಿದ್ದಾರೆ. ಅದಾದ ಬಳಿಕ ಅವರು ಮಲ್ಲಿಕಾರ್ಜುನ ಖರ್ಗೆಯವರನ್ನೂ ಭೇಟಿ ಮಾಡಿ ಧನ್ಯವಾದ ಸಲ್ಲಿಸಲಿದ್ದಾರೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ