ಮಂಗಳೂರು: ಸಮಾಜದಲ್ಲಿ ದ್ವೇಷವನ್ನು ಬಿತ್ತುವ ಸಲುವಾಗಿ ಪ್ರಚೋದನಾತ್ಮಕ ಭಾಷಣವನ್ನು ಮಾಡಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಾಗುವುದೆಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣ ಸಂಬಂಧ ಪ್ರತಿಕ್ರಿಯಿಸಿದ ಅವರು, ದ್ವೇಷಪೂರಿತ ಭಾಷಣ ಮಾಡುವವರ ಮೇಲೆ ಎಫ್ಐಆರ್ ದಾಖಲಾಗುತ್ತದೆ. ಅವರು ಭಾಷಣದಲ್ಲಿ ಮಹಿಳೆಯರಿಗೆ ಅಗೌರವವಾಗಿ ಮಾತನಾಡಿದ್ದಾರೆ ಎಂದು ಆರೋಪ ಮಾಡಿದರು.
ಇನ್ನೂ ಧರ್ಮಸ್ಥಳ ಸುತ್ತಲಿನ ಪ್ರಕರಣದ ಎಸ್ಐಟಿ ವರದಿ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎಸ್ಐಟಿಯಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಈ ತಿಂಗಳಾಂತ್ಯದಲ್ಲಿ ಎಸ್ಐಟಿ ವರದಿಯ ಸಲ್ಲಿಕೆಯಾಗಲಿದೆ ಎಂದು ಎಸ್ಐಟಿ ಹೇಳಿದೆ ಎಂದು ಗೃಹಸಚಿವರು ತಿಳಿಸಿರುವುದಾಗಿ ಹೇಳಿದರು. ಇ