ಕುಸ್ತಿ ಕದನ ತಣ್ಣಗಾಗುತ್ತಲೇ ಸಿದ್ದರಾಮಯ್ಯಗೆ ಎದುರಾಗಿದೆ ಮತ್ತೊಂದು ಪರೀಕ್ಷೆ

Krishnaveni K
ಸೋಮವಾರ, 8 ಡಿಸೆಂಬರ್ 2025 (09:00 IST)
ಬೆಂಗಳೂರು: ರಾಜ್ಯದಲ್ಲಿ ಕುಸ್ತಿ ಕದನ ತಣ್ಣಗಾಗಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಮತ್ತು ಸರ್ಕಾರಕ್ಕೆ ಇಂದಿನಿಂದ ಮತ್ತೊಂದು ಅಗ್ನಿಪರೀಕ್ಷೆ ಎದುರಾಗಲಿದೆ.

ಇಂದಿನಿಂದ ರಾಜ್ಯ ವಿಧಾನಸಭೆ ಅಧಿವೇಶನ ಆರಂಭವಾಗಲಿದೆ. ವಿಶೇಷವಾಗಿ ಉತ್ತರ ಕರ್ನಾಟಕದ ಸಮಸ್ಯೆ ಚರ್ಚೆ ಮಾಡಲು ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಈ ಅಧಿವೇಶನ ಸಿದ್ದರಾಮಯ್ಯ ಮತ್ತು ಸರ್ಕಾರದ ಪಾಲಿಗೆ ಸವಾಲಿನದ್ದಾಗಿದೆ.

ಯಾಕೆಂದರೆ ಈ ಬಾರಿ ವಿಪಕ್ಷಗಳಿಗೆ ಸರ್ಕಾರದ ವಿರುದ್ಧ ಮುಗಿಬೀಳಲು ಸಾಕಷ್ಟು ಅಸ್ತ್ರಗಳಿವೆ. ಸಿಎಂ, ಡಿಸಿಎಂ ದುಬಾರಿ ವಾಚ್ ಪ್ರಕರಣ, ಕಾಂಗ್ರೆಸ್ ನಲ್ಲಿರುವ ಅಧಿಕಾರ ಹಂಚಿಕೆ ತಿಕ್ಕಾಟ, ರೈತರ ಸಮಸ್ಯೆಗಳು ಸೇರಿದಂತೆ ವಿಪಕ್ಷಗಳು ಸರ್ಕಾರದ ವಿರುದ್ಧ ಹೋರಾಟಕ್ಕೆ ಸಿದ್ಧತೆ ನಡೆಸಿದೆ.

ಈಗಾಗಲೇ ಸಿಎಂ ಸಿದ್ದರಾಮಯ್ಯನವರು ಪ್ರತಿಪಕ್ಷಗಳ ಆರೋಪಗಳಿಗೆ ಉತ್ತರ ಕೊಡಲು ಸಜ್ಜಾಗುವಂತೆ ತಮ್ಮ ಸಚಿವರಿಗೆ ಸೂಚನೆ ನೀಡಿದ್ದಾರೆ. ಎಲ್ಲರೂ ಸದನಕ್ಕೆ ಹಾಜರಾಗಲು ಖಡಕ್ ಸೂಚನೆ ಕೊಟ್ಟಿದ್ದಾರೆ. ಕಾಂಗ್ರೆಸ್ ನೊಳಗಿನ ರಾಜಕೀಯವೇನೇ ಇರಲಿ, ಈಗ ಅದೆಲ್ಲವನ್ನೂ ಬದಿಗೊತ್ತಿ ಎಲ್ಲಾ ನಾಯಕರು ಒಟ್ಟಾಗಿ ವಿಪಕ್ಷವನ್ನು ಎದುರಿಸಬೇಕಾದ ಸವಾಲು ಈಗ ಸಿದ್ದರಾಮಯ್ಯನವರ ಮೇಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಿವೇಶನ ಅತಿಕ್ರಮ ತೆರವುಗೊಳಿಸಲು ಹೋದಾಗ ಪೆಪ್ಪರ್ ಸ್ಪ್ರೇ ಹಾಕಿ ದಾಳಿ Video

ರೈಲು ಹತ್ತಿದ ಮಗುವಿಗಾಗಿ ಪ್ರಾಣದ ಹಂಗು ತೊರೆದು ಓಡಿದ ತಾಯಿಯ ಮನಕಲಕುವ ದೃಶ್ಯ Video

ನನ್ನ ಧರ್ಮದ ಬಗ್ಗೆ ಕೇಳಲು ಮೋದಿ ಯಾರು: ಕಾಕ್ರೋಚ್ ಪಾರ್ಟಿ ಸ್ಥಾಪಕ ಅಭಿಜಿತ್ ದೀಪ್ಕೆ ಹಳೆಯ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments