Select Your Language

Notifications

webdunia
webdunia
webdunia
webdunia

ಮೈಸೂರು ದಸರಾ ಉದ್ಘಾಟಿಸಿ: ಸೋನಿಯಾ ಗಾಂಧಿ ಕರೆಯಲು ದೆಹಲಿಗೆ ತೆರಳಲಿರುವ ಸಿದ್ದರಾಮಯ್ಯ

Sonia Gandhi

Krishnaveni K

ಬೆಂಗಳೂರು , ಶುಕ್ರವಾರ, 22 ಆಗಸ್ಟ್ 2025 (09:41 IST)
ಬೆಂಗಳೂರು: ಈ ಬಾರಿ ದಸರಾ ಉದ್ಘಾಟನೆ ಮಾಡುವವರು ಯಾರು ಎಂದು ಇನ್ನೂ ಘೋಷಣೆಯಾಗಿಲ್ಲ. ಮೂಲಗಳ ಪ್ರಕಾರ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ದಸರಾ ಉದ್ಘಾಟನೆ ಮಾಡಲಿದ್ದಾರೆ.

ಇದಕ್ಕಾಗಿ ಸಿಎಂ ಸಿದ್ದರಾಮಯ್ಯ ಈಗಾಗಲೇ ಪತ್ರ ಮುಖೇನ ಸೋನಿಯಾ ಗಾಂಧಿಯವರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಆದರೆ ಇದಕ್ಕೆ ಯಾವುದೇ ಉತ್ತರ ಬಂದಿಲ್ಲ. ಹೀಗಾಗಿ ಸ್ವತಃ ಸಿದ್ದರಾಮಯ್ಯನವರೇ ದೆಹಲಿಗೆ ತೆರಳಿ ಸೋನಿಯಾ ಗಾಂಧಿಯವರನ್ನು ಆಹ್ವಾನಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಮೈಸೂರು ದಸರಾ ಕಳೆದ ಬಾರಿ ಹಂಪ ನಾಗರಾಜಯ್ಯ ದಸರಾ ಉದ್ಘಾಟನೆ ಮಾಡಿದ್ದರು. ಸಾಮಾನ್ಯವಾಗಿ ನಾಡಿನ ಸಾಹಿತಿಗಳು, ಖ್ಯಾತನಾಮರೇ ದಸರಾ ಉದ್ಘಾಟನೆ ಮಾಡುತ್ತಾರೆ. ಬೇರೆ ರಾಜ್ಯದ ಅಥವಾ ರಾಷ್ಟ್ರದ ರಾಜಕೀಯ ಗಣ್ಯರು ದಸರಾ ಉದ್ಘಾಟನೆ ಮಾಡಿದ್ದು ತೀರಾ ಕಡಿಮೆ.

ಆದರೆ ಈ ಬಾರಿ ಸೋನಿಯಾ ಗಾಂಧಿಯವರನ್ನು ಕರೆತರಲು ಪ್ರಯತ್ನ ನಡೆದಿದೆ. ಇದಕ್ಕೆ ಸೋನಿಯಾ ಗಾಂಧಿ ಒಪ್ಪುತ್ತಾರಾ, ಬಿಜೆಪಿಯಿಂದ ಯಾವ ರೀತಿ ಪ್ರತಿಕ್ರಿಯೆ ಬರುತ್ತದೆ ಎಂದು ಕಾದು ನೋಡಬೇಕಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಂಕಷ್ಟದಲ್ಲಿ ಅಡಕೆ ಬೆಳೆಗಾರರು: ಕೇಂದ್ರ ಕೃಷಿ ಸಚಿವರನ್ನು ಭೇಟಿ ಮಾಡಿದ ರಾಜ್ಯದ ಸಂಸದರು