ರಾಹುಕಾಲಕ್ಕೆ ಮೊದಲೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ

Krishnaveni K
ಗುರುವಾರ, 15 ಫೆಬ್ರವರಿ 2024 (10:27 IST)
ಬೆಂಗಳೂರು: ಲೋಕಸಭೆ ಚುನಾವಣೆಗೆ ಕೆಲವೇ ದಿನಗಳ ಮೊದಲು ಸಿಎಂ ಸಿದ್ದರಾಮಯ್ಯ ನಾಳೆ ಕರ್ನಾಟಕ ಬಜೆಟ್ ಮಂಡಿಸಲಿದ್ದಾರೆ. ಚುನಾವಣೆ ದೃಷ್ಟಿಯಿಂದ ಕೆಲವು ಆಕರ್ಷಕ ಯೋಜನೆಗಳ ನಿರೀಕ್ಷೆಯಲ್ಲಿ ಜನರಿದ್ದಾರೆ.

ರಾಜ್ಯದ ಪರ ಅತಿ ಹೆಚ್ಚು ಬಜೆಟ್ ಮಂಡಿಸಿರುವ ಖ್ಯಾತಿ ಹೊಂದಿರುವ ಸಿಎಂ ಸಿದ್ದರಾಮಯ್ಯ, ಮತ್ತೊಂದು ಬಜೆಟ್ ಮಂಡಿಸಲಿದ್ದಾರೆ. ಫೆಬ್ರವರಿ 16 ರಂದು ಅಂದರೆ ನಾಳೆ 10.15 ಕ್ಕೆ ಸಿಎಂ ಸಿದ್ದು ಬಜೆಟ್ ಮಂಡಿಸಲಿದ್ದಾರೆ. ರಾಹುಕಾಲ ಶುರುವಾಗುವ 15  ನಿಮಿಷ ಮೊದಲು ಬಜೆಟ್ ಮಂಡನೆ ಶುರು ಮಾಡಲಿದ್ದಾರೆ. ನಾಳೆ 10.30 ರಿಂದ 12.30 ರವರೆಗೆ ರಾಹು ಕಾಲವಿದೆ. ಹೀಗಾಗಿ 10.15 ಕ್ಕೇ ಬಜೆಟ್ ಮಂಡನೆ ಶುರು ಮಾಡಲಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ಪಾಲಿಗೆ ಇದು ದಾಖಲೆಯ 15 ನೇ ಬಜೆಟ್ ಆಗಿರಲಿದೆ. ಈ ಬಾರಿ ಬಜೆಟ್ 3.80 ಲಕ್ಷ ಕೋಟಿ ರೂ. ತಲುಪುವ ನಿರೀಕ್ಷೆಯಿದೆ.  ಆದರೆ ಪಂಚ ಗ್ಯಾರಂಟಿಯಿಂದಾಗಿ ರಾಜ್ಯದ ಆದಾಯದ ಮೇಲೂ ಕೊಂಚ ಹೊಡೆತ ಬಿದ್ದಿದ್ದು ಇದನ್ನು ಸರಿದೂಗಿಸುವುದು ಸರ್ಕಾರಕ್ಕೆ ಸವಾಲಾಗಿದೆ.

ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿಯಿರುವುದರಿಂದ ಮತದಾರರನ್ನು ಸೆಳೆಯುವ ಉದ್ದೇಶದಿಂದ ಕೆಲವೊಂದು ಜನಪ್ರಿಯ ಯೋಜನೆಗಳನ್ನು ಜಾರಿಗೆ ತರುವ ಸಾಧ್ಯತೆಯಿದೆ.  ಈ ಸಾಲಿನಲ್ಲಿ 58,000 ಕೋಟಿ ರೂ. ಗ್ಯಾರಂಟಿಗಳಿಗಾಗಿ ಮೀಸಲಿಡಬೇಕಾಗುತ್ತದೆ. ಹಳೆ ಮೈಸೂರು, ಕಲ್ಯಾಣ ಕರ್ನಾಟಕ, ಕರಾವಳಿ ಕರ್ನಾಟಕ, ಮಧ‍್ಯಕರ್ನಾಟಕಕ್ಕೆ ಹೆಚ್ಚಿನ ಕೊಡುಗೆ ಸಿಗುವ ನಿರೀಕ್ಷೆಯಿದೆ. ಚುನಾವಣೆ ದೃಷ್ಟಿಯಿಂದ ಜನಪ್ರಿಯ ಬಜೆಟ್ ಇದಾಗಬಹುದು ಎಂಬ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ವಾರಂತ್ಯಕ್ಕೆ ಭಾರೀ ಮಳೆ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮುಂದಿನ ಸುದ್ದಿ
Show comments