Webdunia - Bharat's app for daily news and videos

Install App

ಮುಡಾ ಸಂಕಷ್ಟದ ಬೆನ್ನಲ್ಲೇ ಚಾಮುಂಡಿ ತಾಯಿಯ ಮೊರೆ ಹೋಗಲಿರುವ ಸಿದ್ದರಾಮಯ್ಯ

Krishnaveni K
ಸೋಮವಾರ, 2 ಸೆಪ್ಟಂಬರ್ 2024 (13:33 IST)
ಬೆಂಗಳೂರು: ಮುಡಾ ಹಗರಣದಲ್ಲಿ ಸಂಕಷ್ಟಕ್ಕೀಡಾಗಿರುವ ಬೆನ್ನಲ್ಲೇ ಇಂದು ಸಂಜೆ ಸಿಎಂ ಸಿದ್ದರಾಮಯ್ಯ ತವರು ಮೈಸೂರಿನತ್ತ ಪ್ರಯಾಣ ಬೆಳೆಸಲಿದ್ದು, ಚಾಮುಂಡಿ ತಾಯಿಯ ಪೂಜೆ ಮಾಡಲಿದ್ದಾರೆ.

ಎಲ್ಲಾ ನಿಗದಿಯಂತೆ ನಡೆದಿದ್ದರೆ ಇಂದೇ ಸಿದ್ದರಾಮಯ್ಯ ಚಾಮುಂಡಿ ತಾಯಿಯ ದರ್ಶನ ಪಡೆಯಬೇಕಿತ್ತು. ಆದರೆ ಇಂದು ಮಧ್ಯಾಹ್ನ ಕೋರ್ಟ್ ನಲ್ಲಿ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಯುತ್ತಿದೆ.

ಈ ಹಿನ್ನಲೆಯಲ್ಲಿ ಸಿಎಂ ಇಂದು ಬೆಳಿಗ್ಗೆ ಮೈಸೂರಿಗೆ ಪ್ರಯಾಣ ಮಾಡುವುದನ್ನು ಕೊನೆ ಕ್ಷಣದಲ್ಲಿ ರದ್ದು ಮಾಡಿದ್ದಾರೆ. ಸಂಜೆ ವೇಳೆಗೆ ವಿಶೇಷ ವಿಮಾನದಲ್ಲಿ ಮೈಸೂರಿಗೆ ಪ್ರಯಾಣಿಸಿ ನಾಳೆ ಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆಗೆ ಸಂಕಷ್ಟದಿಂದ ಪಾರು ಮಾಡುವಂತೆ ಪೂಜೆ ಮಾಡಲಿದ್ದಾರೆ.

ಮುಡಾ ಹಗರಣ ವಿಚಾರವಾಗಿ ಕೋರ್ಟ್ ಇಂದೇ ತೀರ್ಪು ನೀಡುವ ಸಾಧ್ಯತೆ ಕಡಿಮೆ. ಆದರೆ ವಿಚಾರಣೆ ಇಂದಿಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಈ ಕೇಸ್ ಕೇವಲ ಸಿದ್ದರಾಮಯ್ಯನವರಿಗೆ ಮಾತ್ರವಲ್ಲ, ಕಾಂಗ್ರೆಸ್ ಪಕ್ಷಕ್ಕೇ ಮಹತ್ವದ್ದಾಗಿದೆ. ಈ ಪ್ರಕರಣದಲ್ಲಿ ರಾಜ್ಯಪಾಲರ ಕ್ರಮ ಸರಿ ಎಂದು ಹೈಕೋರ್ಟ್ ತೀರ್ಪು ನೀಡಿದರೆ ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹದಾಯಿ ಯೋಜನೆಗೆ ಅನುಮತಿ ನಿರಾಕರಿಸಿ ಕೇಂದ್ರದಿಂದ ಕನ್ನಡಿಗರಿಗೆ ಅನ್ಯಾಯ: ಸಿದ್ದರಾಮಯ್ಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಪರಿಶುದ್ಧ ಚಿನ್ನದ ದರ ಇಂದು ಹೊಸ ದಾಖಲೆ

ಆಂಧ್ರದಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆ: ಆರ್ ಅಶೋಕ್, ವಿಜಯೇಂದ್ರ ಆಕ್ರೋಶ

ದೆಹಲಿಗೆ ತೆರಳಲಿರುವ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಗೆ ಇಂದಾದ್ರೂ ಸಿಗ್ತಾರಾ ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments