ಸಂಕಟ ಬಂದಾಗ ಮಾತ್ರ ದೇವರು, ಕುಂಕುಮ ನೆನಪಾಗುತ್ತಾ: ಸಿದ್ದರಾಮಯ್ಯಗೆ ನೆಟ್ಟಿಗರ ಟಾಂಗ್

Krishnaveni K
ಸೋಮವಾರ, 14 ಅಕ್ಟೋಬರ್ 2024 (11:11 IST)
ಬೆಂಗಳೂರು: ಸವದತ್ತಿಗೆ ತೆರಳಿ ಯಲ್ಲಮ್ಮನ ಪೂಜೆ ಮಾಡಿರುವ ಸಿಎಂ ಸಿದ್ದರಾಮಯ್ಯಗೆ ನೆಟ್ಟಿಗರು ಸಂಕಟ ಬಂದಾಗ ಮಾತ್ರ ದೇವರು, ಕುಂಕುಮ ಎಲ್ಲಾ ನೆನಪಾಗುತ್ತಾ ಎಂದು ಟಾಂಗ್ ಕೊಟ್ಟಿದ್ದಾರೆ.

ಸವದತ್ತಿಯಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಲು ಬಂದಿದ್ದ ಸಿಎಂ ಸಿದ್ದರಾಮಯ್ಯ ದೇವಿಯ ಆಶೀರ್ವಾದ ಪಡೆದು ಪೂಜೆಯಲ್ಲಿ ಪಾಲ್ಗೊಂಡರು. ಈ ಫೋಟೋಗಳನ್ನು ಸಿದ್ದರಾಮಯ್ಯ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಈ ವೇಳೆ ಪತ್ನಿ ಪಾರ್ವತಿ ಹೆಸರಿನಲ್ಲಿ ಸವದತ್ತಿ ಯಲ್ಲಮ್ಮನಿಗೆ ವಿಶೇಷ ಪೂಜೆಯನ್ನೂ ಸಲ್ಲಿಸಿದರು.

ಇತ್ತೀಚೆಗೆ ಮುಡಾ ಹಗರಣ ಬೆಳಕಿಗೆ ಬಂದ ಮೇಲೆ ಸಿಎಂ ಸಿದ್ದರಾಮಯ್ಯ ದೇವಾಲಯಗಳಿಗೆ ಹೋಗುವುದು ಹೆಚ್ಚಾಗಿದೆ. ಅದರಲ್ಲೂ ಮೈಸೂರಿನ ಚಾಮುಂಡಿ ತಾಯಿ ದರ್ಶನಕ್ಕೆ ಹಲವು ಬಾರಿ ಹೋಗಿದ್ದಾರೆ. ಅಷ್ಟೇ ಅಲ್ಲದೆ, ಯಾವತ್ತೂ ಕುಂಕುಮ ಇಡಲು ನಿರಾಕರಿಸುವ ಸಿದ್ದರಾಮಯ್ಯ ಈಗ ಮರುಮಾತನಾಡದೇ ಕುಂಕುಮವಿಟ್ಟುಕೊಳ್ಳುತ್ತಿದ್ದಾರೆ.

ಇದೇ ಕಾರಣಕ್ಕೆ ನೆಟ್ಟಿಗರು ಈಗ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ. ನಿಮಗೆ ಸಂಕಟ ಬಂದಾಗ ಮಾತ್ರ ದೇವರು, ಕುಂಕುಮ ಎಲ್ಲಾ ನೆನಪಾಗುತ್ತಾ? ಕುಂಕುಮ, ಕೇಸರಿ ಕಂಡರೆ ಭಯ ಎನ್ನುತ್ತಿದ್ದವರು ಈಗ ಯಾಕೆ ಮೇಲಿಂದ ಮೇಲೆ ಟೆಂಪಲ್ ರನ್ ಮಾಡುತ್ತಿದ್ದೀರಿ ಎಂದು ಕೆಲವರು ವ್ಯಂಗ್ಯ ಮಾಡಿದ್ದಾರೆ. ಮೊನ್ನೆ ಚಾಮುಂಡಿ ತಾಯಿ, ಇಂದು ಯಲ್ಲಮ್ಮ. ಯಾಕೆ ಈಗ ಅನ್ಯಧರ್ಮದ ದೇವಾಲಯಗಳಿಗೆ ಭೇಟಿ ನೀಡುತ್ತಿಲ್ಲ ಎಂದು ಕಾಮೆಂಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನ ದಾಳಿಯಲ್ಲಿ ಅಫ್ಘಾನಿಸ್ತಾನ ಕ್ರಿಕೆಟಿಗರ ಸಾವು: ರಶೀದ್ ಖಾನ್ ಆಕ್ರೋಶ

Karnataka Weather: ವಾರಂತ್ಯಕ್ಕೆ ಮಳೆಯ ಸಾಧ್ಯತೆಯಿದೆಯಾ ಇಲ್ಲಿದೆ ಹವಾಮಾನ ವರದಿ

ಅಸ್ಸಾಂನ ಗಾಯಕ ಜುಬಿನ್ ಗರ್ಗ್ ನಿಧನ: ನ್ಯಾಯಯುತ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ನನಗೇನಾದರೆ ರಾಜ್ಯ ಸರ್ಕಾರ, ಪ್ರಿಯಾಂಕ್ ಖರ್ಗೆ ಹೊಣೆ: ಛಲವಾದಿ ನಾರಾಯಣಸ್ವಾಮಿ

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾದ ರಾಯಚೂರಿನ ಪಿಡಿಓಗೆ ಬಿಗ್ ಶಾಕ್

ಮುಂದಿನ ಸುದ್ದಿ
Show comments