Publish Date: Tue, 14 May 2019 (13:17 IST)
Updated Date: Tue, 14 May 2019 (18:54 IST)
ಮಾಜಿ ಸಿಎಂ ಸಿದ್ದರಾಮಯ್ಯ ಟ್ವಿಟರ್ ಟಾಕ್ ಮುಂದುವರಿದಿದೆ.
ಗೆಳೆಯ ಜಿ.ಟಿ.ದೇವೇಗೌಡರು ಇತ್ತೀಚೆಗೆ ನನ್ನ ವಿರುದ್ಧ ಮಾತನಾಡಿಲ್ಲ ನಿಜ. ಆದರೆ ಮೈಸೂರಲ್ಲಿ ಜೆಡಿಎಸ್ ನವರು ಬಿಜೆಪಿಗೆ ಮತ ಹಾಕಿದ್ದಾರೆಂಬ ಅವರ ಹೇಳಿಕೆ ಸತ್ಯವಾಗಿದ್ದರೂ ಅನಗತ್ಯವಾಗಿತ್ತು. ಇದರಿಂದಾಗಿ ಕೆರಳಿದ ನಮ್ಮ ಕಾರ್ಯಕರ್ತರು ಜೆಡಿಎಸ್ ವಿರುದ್ಧ ಮಾತನಾಡತೊಡಗಿದ್ದರು.
ಮೈತ್ರಿಕೂಟದಲ್ಲಿ ಇಂತಹದನ್ನು ಮಾಡಬಾರದು. ನನ್ನ ಯಾವ ಕಾರ್ಯಕ್ರಮವೂ Populist ಇಲ್ಲವೇ ತಾತ್ಕಾಲಿಕ ಅಲ್ಲ.
ಅನ್ನಭಾಗ್ಯ, ಕ್ಷೀರಭಾಗ್ಯ, ಕ್ಷೀರಧಾರೆ, ಕೃಷಿಭಾಗ್ಯ, ಪಶುಭಾಗ್ಯ.... ಇವುಗಳನ್ನು ಯಾವುದೇ ಸರ್ಕಾರ ನಿಲ್ಲಿಸಲಿ ನೋಡೋಣ ಎಂದು ಸವಾಲು ಹಾಕಿದ್ದಾರೆ.
ಜಾಗೃತ ಮತದಾರರು ಇರುವ ವರೆಗೆ ಇವೆಲ್ಲ ಶಾಶ್ವತ ಕಾರ್ಯಕ್ರಮಗಳು. ಟೀಕಾಕಾರರಿಗೆ ನೆನಪಿರಲಿ ಎಂದು ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ.
ಇಂದು ಸಹ ತಮ್ಮ ವಿರುದ್ಧ ಟೀಕೆ ಮಾಡವವರಿಗೆ ಟ್ಚಿಟ್ ಮೂಲಕ ಉತ್ತರ ಮುಂದುವರಿಸಿದ್ದಾರೆ ಸಿದ್ದರಾಮಯ್ಯ.