Webdunia - Bharat's app for daily news and videos

Install App

ಸಿಆರ್‌ಪಿಎಫ್ ಪರೀಕ್ಷೆ ಕನ್ನಡದಲ್ಲಿಯೂ ನಡೆಸುವಂತೆ ಸಿದ್ದರಾಮಯ್ಯ ಒತ್ತಾಯ

Webdunia
ಮಂಗಳವಾರ, 11 ಏಪ್ರಿಲ್ 2023 (06:19 IST)
ಬೆಂಗಳೂರು : ಕೇಂದ್ರೀಯ ಮೀಸಲು ಪೊಲೀಸ್ ಪಡೆ ನೇಮಕಾತಿ ಪರೀಕ್ಷೆಯನ್ನು ಕನ್ನಡದಲ್ಲಿ ನಡೆಸದೆ ಹಿಂದಿ ಮತ್ತು ಇಂಗ್ಲಿಷ್ನಲ್ಲಿ ಮಾತ್ರ ನಡೆಸುವ ನಿರ್ಧಾರವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ವಿರೋಧಿಸಿದ್ದಾರೆ.
 
ಕೇಂದ್ರೀಯ ಮೀಸಲು ಪೊಲೀಸ್ ಪಡೆ ನೇಮಕಾತಿ ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲೀಷ್ನಲ್ಲಿ ನಡೆಸುತ್ತಿದ್ದು, ಇದನ್ನು ಪ್ರಶ್ನಿಸಿ ಸಿದ್ದರಾಮಯ್ಯನವರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ಕುರಿತು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸರಣಿ ಟ್ವೀಟ್ ಮಾಡಿದ್ದಾರೆ.

ಇದರಿಂದಾಗಿ ಕರ್ನಾಟಕದಂತಹ ಹಿಂದಿಯೇತರ ರಾಜ್ಯಗಳ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಬಿಜೆಪಿಯ ಡಬಲ್ ಎಂಜಿನ್ ಸರ್ಕಾರವು ರಾಜ್ಯದ ಆಕಾಂಕ್ಷಿಗಳನ್ನು ವಿಫಲಗೊಳಿಸಿದೆ ಎಂದು ಹೇಳಿದರು. ಸಿಆರ್ಪಿಎಫ್ ನೇಮಕಾತಿ ಪರೀಕ್ಷೆಯನ್ನು ಕನ್ನಡದಲ್ಲೂ ಬರೆಯಲು ಕೂಡಲೇ ಅವಕಾಶ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸುತ್ತೇನೆ.

ಹಿಂದಿಯೇತರ ರಾಜ್ಯಗಳ ಅಭ್ಯರ್ಥಿಗಳಿಗೆ ಸಹಾಯ ಮಾಡಲು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ಪರೀಕ್ಷೆ ಬರೆಯುವ ನಿಯಮವನ್ನು ಸಡಿಲಗೊಳಿಸುವುದು ಮುಖ್ಯ ಎಂದು ಟ್ವಿಟ್ಟರ್ ಮೂಲಕ ಮೋದಿಯವರಲ್ಲಿ ಮನವಿ ಮಾಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಪಹಲ್ಗಾಮ್ ದಾಳಿಕೋರರ ಸಂಭ್ರಮಾಚರಣೆ ನೋಡಿದ್ರೆ ರಕ್ತ ಕುದಿಯುತ್ತೆ

Karnataka Rains: ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಿಗೆ ವಿಶೇಷ ಎಚ್ಚರಿಕೆ

Indian Army: ಗಡಿಯಲ್ಲಿ ಕಾಲು ಕೆರೆದುಕೊಂಡ ಪಾಕಿಸ್ತಾನ: ಭಾರತೀಯ ಯೋಧರ ಪ್ರತಿದಾಳಿಗೆ ಪಾಕ್ ಸೈನಿಕರು ಫಿನಿಶ್ (Video)

Indus Water treaty: ಸಿಂಧೂ ನದಿ ಒಪ್ಪಂದ ಎಂದರೇನು, ಇದನ್ನ ಮಾಡಿದವರು ಯಾರು: ಪಾಕಿಸ್ತಾನಕ್ಕೆ ಆಗುವ ನಷ್ಟವೇನು

Pahalgram: ಸಕಲ ಸರ್ಕಾರಿ ಗೌರವಗಳೊಂದಿಗೆ ಮಂಜುನಾಥ್‌, ಭರತ್ ಭೂಷಣ್‌ಗೆ ಅಂತ್ಯಕ್ರಿಯೆ

ಮುಂದಿನ ಸುದ್ದಿ
Show comments