ಮೈಸೂರು ರಾಜಮನೆತನದ ಜೊತೆ ಸಿದ್ದರಾಮಯ್ಯ ಗುದ್ದಾಟ ಇದೇ ಮೊದಲಲ್ಲ

Krishnaveni K
ಮಂಗಳವಾರ, 13 ಆಗಸ್ಟ್ 2024 (09:32 IST)
ಮೈಸೂರು: ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮೈಸೂರು ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಸಿಡಿದೆದ್ದಿದ್ದು ಕೋರ್ಟ್ ಮೆಟ್ಟಿಲೇರಿದ್ದಾರೆ.

ಅಂದ ಹಾಗೆ ಸಿದ್ದರಾಮಯ್ಯ ಮತ್ತು ಪ್ರಮೋದಾ ದೇವಿ ಒಡೆಯರ್ ನಡುವಿನ ಗುದ್ದಾಟ ಇದೇ ಮೊದಲಲ್ಲ. ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೂ ಮೈಸೂರು ರಾಜಮನೆತನದ ಜೊತೆ ಅವರ ತಿಕ್ಕಾಟ ನಡೆಯುತ್ತಲೇ ಇತ್ತು. ಇದೀಗ ಚಾಮುಂಡೇಶ್ವರಿ ದೇವಸ್ಥಾನದ ಆಡಳಿತದಲ್ಲಿ ರಾಜಮನೆತನದ ಅಧಿಕಾರಕ್ಕೆ ಬ್ರೇಕ್ ಹಾಕಲು ಸಿದ್ದು ಸರ್ಕಾರ ಪ್ರಾಧಿಕಾರ ರಚಿಸಿದೆ ಎಂಬುದು ಪ್ರಮೋದಾ ದೇವಿ ಆರೋಪ.

ಇದೇ ಕಾರಣಕ್ಕೆ ಅವರೀಗ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದೆ. ಹೈಕೋರ್ಟ್ ಈಗ ಇದಕ್ಕೆ ತಾತ್ಕಾಲಿಕ ತಡೆ ನೀಡಿದೆ. ಇದರ ಬೆನ್ನಲ್ಲೇ ಪ್ರಮೋದಾ ದೇವಿ ಪತ್ರಿಕಾಗೋಷ್ಠಿ ನಡೆಸಿ ರಾಜಮನೆತನದ ವಿರುದ್ಧ ರಾಜ್ಯ ಸರ್ಕಾರ ಬೇಕೆಂದೇ ಇಂತಹದ್ದೊಂದು ಮಸಲತ್ತು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೂ ಒಮ್ಮೆ ಮೈಸೂರು ಅರಮನೆ ಆಸ್ತಿಯನ್ನು ಸಂಪೂರ್ಣವಾಗಿ ಸರ್ಕಾರದ ವಶ ಮಾಡಿಕೊಳ್ಳಲು ಯತ್ನಿಸಿದ್ದರು ಎಂಬ ಆರೋಪವಿತ್ತು. ಆಗಲೂ ಪ್ರಮೋದಾ ದೇವಿ ಸಿಡಿದೆದ್ದಿದ್ದರು. ಅದಲ್ಲದೆ, ರಾಜಮನೆತನದ ಆಡಳಿತ ನಂತರ ರಾಜ್ಯದಲ್ಲಿ ನಮ್ಮದೇ ಶ್ರೇಷ್ಠ ಆಡಳಿತ ಎಂದು ಸಿದ್ದರಾಮಯ್ಯ ಹೊಗಳಿಕೊಂಡಿದ್ದು ಪ್ರಮೋದಾ ದೇವಿ ಕೆಂಗಣ್ಣಿಗೆ ಗುರಿಯಾಗಿತ್ತು. ಇದೀಗ ಮತ್ತೊಮ್ಮೆ ರಾಜಮಾತೆ ವರ್ಸಸ್ ಸಿದ್ದರಾಮಯ್ಯ ವಾರ್ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಬಜೆಟ್‌: ರಾಜ್ಯದ ವಿವಿಧ ನಗರಕ್ಕೆ ಹೊಸ 12 ಬಜೆಟ್ ಘೋಷಣೆ

ಸಿದ್ದರಾಮಯ್ಯರ ದಾಖಲೆಯ ಬಜೆಟ್ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೀಗಿತ್ತು

ಸಿದ್ದರಾಮಯ್ಯರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು

ಸಿದ್ದರಾಮಯ್ಯ ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

ಥಿಯೇಟರ್‌ನಲ್ಲಿ ರೋಮ್ಯಾಂಟಿಕ್ ಸಿನಿಮಾ ವಿತ್ ಲವ್ ನೋಡಲು ಮಿಸ್ ಮಾಡಿದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments