Select Your Language

Notifications

webdunia
webdunia
webdunia
Friday, 11 April 2025
webdunia

ದೇವರಾಜ್ ಅರಸು ಜತೆ ತಮ್ಮನ್ನು ಹೋಲಿಸಿಕೊಂಡ ಸಿದ್ದರಾಮಯ್ಯ; ಬಿಜೆಪಿ ಹೇಳಿದ್ದೇನು?

ಸಿದ್ದರಾಮಯ್ಯ
ಹುಬ್ಬಳ್ಳಿ , ಗುರುವಾರ, 16 ಮೇ 2019 (15:31 IST)
ಸಿದ್ದರಾಮಯ್ಯ ತಮ್ಮನ್ನು ದೇವರಾಜ್ ಅರಸು ಅವರಿಗೆ ಹೋಲಿಕೆ ಮಾಡಿಕೊಳ್ಳುತ್ತಿದ್ದಾರೆ ಅಂತ ಬಿಜೆಪಿ ದೂರಿದೆ.

ಸಿದ್ದರಾಮಯ್ಯನವರಿಗೆ ನಾಚಿಕೆ ಆಗಬೇಕು. ಎಲ್ಲಿನ ಅರಸು ಎಲ್ಲಿನ ಸಿದ್ದರಾಮಯ್ಯ?. ರಿಯಲ್ ಎಸ್ಟೇಟ್ ದಂಧೆ ಮಾಡುವವರನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದೀರಿ. ಹೀಗಂತ ಹುಬ್ಬಳ್ಳಿಯಲ್ಲಿ ಸಂಸದೆ‌ ಶೋಭಾ ಕರಂದ್ಲಾಜೆ ಆರೋಪ ಮಾಡಿದ್ದಾರೆ.
ಅರಸು ಅವರು ನಿಮ್ಮಂತೆ ಧರ್ಮ ವಿಭಜನೆಯ ಕೆಲಸ ಮಾಡಲಿಲ್ಲ. ಅನ್ನಭಾಗ್ಯ ಅಕ್ಕಿಯಲ್ಲಿ ಹುಳ, ನುಸಿ ಇದೆ.

ಅಂತಾ ಅಕ್ಕಿಯನ್ನು ನಮ್ಮಲ್ಲಿ ಕೋಳಿಗಳೂ ತಿನ್ನಲ್ಲ. ಅದನ್ನು ಗರ್ಭಿಣಿಯರಿಗೆ ತಿನ್ನಿಸುತ್ತಿದ್ದಾರೆ. ಗೋಂಡಾಳ ಬಂದಂತ ಅಕ್ಕಿ ಕೊಟ್ಟು ಪಾಪದ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದ್ರು.

ಕಾಂಗ್ರೆಸ್‌ನವರು ಚುನಾವಣೆ ಸಂದರ್ಭದಲ್ಲಿ ಕುಂದಗೋಳ ಮತ್ತು ಚಿಂಚೋಳಿಗೆ ಬಂದಿದ್ದಾರೆ. ಈ ಸರ್ಕಾರ ಮುಂದುವರಿಯಲು ಯಾವುದೇ ನೈತಿಕತೆಯಿಲ್ಲ ಎಂದು ಜರಿದ್ರು.



Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯರಿಂದ ಹೈಕಮಾಂಡ್ ಗೆ ಬ್ಲಾಕ್ ಮೇಲ್?