Webdunia - Bharat's app for daily news and videos

Install App

ಗೆಲ್ಲಿಸದ ಸಿದ್ದರಾಮಯ್ಯಗೆ ಸಿಎಂ ಪಟ್ಟ, ಗೆಲ್ಲಿಸಿದ ಖರ್ಗೆ ಜತೆ ಜಸ್ಟ್‌ ಫೋಟೋ: ಆರ್‌ ಅಶೋಕ್‌ ಅಪಹಾಸ್ಯ

sampriya
ಬುಧವಾರ, 5 ಜೂನ್ 2024 (20:03 IST)
Photo By X
ಬೆಂಗಳೂರು: ತವರು ಜಿಲ್ಲೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಗೆಲ್ಲಿಸಿಕೊಡದ ಸಿದ್ದರಾಮಯ್ಯಗೆ ಸಿಎಂ ಪಟ್ಟ, ತಮ್ಮನನ್ನೂ ಗೆಲ್ಲಿಸಿಕೊಡದ ಶಿವಕುಮಾರ್‌ಗೆ ಡಿಸಿಎಂ ಪಟ್ಟ, ಆದರೆ ಕಲ್ಯಾಣ ಕರ್ನಾಟಕ ಗೆಲ್ಲಿಸಿದ ಖರ್ಗೆ ಅವರಿಗೆ ನೆಹರೂ ಕುಟುಂಬದ ಜತೆ ಒಂದು ಫೋಟೋ ಅಷ್ಟೇ ಎಂದು ವಿಪಕ್ಷ ನಾಯಕ ಆರ್‌ ಅಶೋಕ್‌ ವ್ಯಂಗ್ಯ ಮಾಡಿದರು. 

ಲೋಕಸಭಾ ಚುನಾವಣೆಯ ಫಲಿತಾಂಶ ಕಳೆದ ದಿನ ಬಹಿರಂಗವಾಗಿದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಲ್ಯಾಣ ಕರ್ನಾಟಕದಲ್ಲಿ ಕಮಾಲ್ ಮಾಡಿ, ಎಲ್ಲ ಐದು ಲೋಕಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ವಶಮಾಡಿಕೊಂಡಿದ್ದಾರೆ. ಇದೀಗ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆನೆ ಬಲ ಬಂದಿದೆ.  ಕಲಬುರಗಿ ಸೇರದಂತೆ, ರಾಯಚೂರು, ಬಳ್ಳಾರಿ, ಕೊಪ್ಪಳ ಹಾಗೂ ಬೀದರ್ ಲೋಕಸಭಾ ಕ್ಷೇತ್ರಗಳಲ್ಲಿ ಭಾರಿ ಬಿರುಸಿನ ಸ್ಪರ್ಧೆ ಏರ್ಪಟ್ಟಿದ್ದರೂ ಮತದಾರರು ಕಾಂಗ್ರೆಸ್ ಕಡೆ ಒಲವು ತೋರಿಸಿ, ಗೆಲುವಿನ ದಡ ಸೇರಿಸಿದ್ದಾರೆ.

ಅದಲ್ಲದೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜಸ್ಟ್‌ ಪಾಸ್‌ ಆಗಿದ್ದ ಬೆನ್ನಲ್ಲೇ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕ ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರು ಸಭೆ ನಡೆಸಿ ನಗುವಿನ ನಗೆ ಬೀರಿರುವ ಫೋಟೋ ಹಂಚಿಕೊಂಡಿದ್ದರು.

ಇದೇ ಫೋಟೋ ಹಂಚಿಕೊಂಡು ಎಕ್ಸ್‌ನಲ್ಲಿ ಬರೆದುಕೊಂಡಿರುವ ಆರ್‌ ಅಶೋಕ್ ಅವರು, ತಮ್ಮ ತವರೂರು  ಮೈಸೂರಿನಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಯನ್ನು ಗೆಲ್ಲಿಸಿಕೊಳ್ಳಲಾಗದ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಪಟ್ಟ, ಇನ್ನೂ ತಮ್ಮ ಸ್ವಂತ ತಮ್ಮನನ್ನು ಗೆಲ್ಲಿಸಿಕೊಡಲಾಗದ ಡಿಕೆ ಶಿವಕುಮಾರ್‌ ಅವರಿಗೆ ಡಿಸಿಎಂ ಪಟ್ಟ, ಆದರೆ ಕಲ್ಯಾಣ ಕರ್ನಾಟಕ ಗೆಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಗಾಂಧಿ ಕುಟುಂಬದ ಜತೆ ಒಂದು ಫೋಟೋ. ಒಟ್ಟಿನಲ್ಲಿ ಕಾಂಗ್ರೆಸ್‌ ಪಕ್ಷದಲ್ಲಿ ದಲಿತ ನಾಯಕರು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದು ಲೇವಾಡಿ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ನಾನು ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿಲ್ಲ: ಡಿಕೆ ಶಿವಕುಮಾರ್ ಹಿಂಗದಿದ್ಯಾಕೆ

ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ

ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ

ಮುಂದಿನ ಸುದ್ದಿ
Show comments