Select Your Language

Notifications

webdunia
webdunia
webdunia
Friday, 11 April 2025
webdunia

ಏಕಾಂಗಿ ಎಂದು ಟೀಕಿಸುತ್ತಿರುವ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

ಬೆಂಗಳೂರು
ಬೆಂಗಳೂರು , ಶುಕ್ರವಾರ, 22 ನವೆಂಬರ್ 2019 (11:45 IST)
ಬೆಂಗಳೂರು : ತಮ್ಮನ್ನು ಪದೇ ಪದೇ ಏಕಾಂಗಿ ಎಂದು ಟೀಕಿಸುತ್ತಿರುವ ಬಿಜೆಪಿ ನಾಯಕರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.



ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಬಿಜೆಪಿಯವ್ರು ನನ್ನ ಮೇಲೆ ಮುಗಿಬೀಳ್ತಿರುವುದು ನೋಡಿದ್ರೆ. ನನ್ನನ್ನು ಟೀಕಿಸಿದವರಿಗೆ ಬಹುಮಾನ ನೀಡುವುದಾಗಿ ಮೋದಿ, ಅಮಿತ್ ಶಾ ಭರವಸೆ ನೀಡಿರುವ ಹಾಗೇ ಇದೆ. ನಾನು ಏಕಾಂಗಿಯಾಗಿದ್ದರೆ ಇವರಿಗ್ಯಾಕೆ ನನ್ನ ಬಗ್ಗೆ ಭಯ? ಎಂದು ಬಿಜೆಪಿ ನಾಯಕರನ್ನು ಪ್ರಶ್ನಿಸಿದ್ದಾರೆ.


ಏಕಾಂಗಿಯಾಗಿ ಹೋಗಿರುವ ಸದಾನಂದಗೌಡರನ್ನು ರಾಜ್ಯ ಬಿಜೆಪಿ ನಾಯಕರು ಗಂಭೀರವಾಗಿ ಸ್ವೀಕರಿಸುತ್ತಿಲ್ಲ. ಇದಕ್ಕಾಗಿ ಅವರು ತಮ್ಮ ಜೋಕ್ ಗಳಿಗೆ ತಾವೇ ನಕ್ಕು ರಾಜ್ಯದ ಜನರಿಗೆ ಮನರಂಜನೆಯನ್ನು ನೀಡುತ್ತಿದ್ದಾರೆ. ಮೊದಲು ಸಿಎಂ ಸ್ಥಾನದಿಂದ ನಂತರ ರೈಲ್ವೆ ಖಾತೆ , ಕಾನೂನು, ಅಂಕಿ-ಅಂಶ ಹೀಗೆ ಎಲ್ಲೆಡೆ  ತಿರಸ್ಕೃತಗೊಂಡ ಡಿವಿಎಸ್ ಈಗ ಬಿಜೆಪಿಯಲ್ಲಿ ಗೊಬ್ಬರವಾಗಿ ಹೋಗಿದ್ದಾರೆ. ಹೀಗಾಗಿ ಅವರು ಹತಾಶರಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಟ್ವೀಟ್ ಮೂಲಕ ಸದಾನಂದ ಗೌಡರಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.



 

Share this Story:

Follow Webdunia kannada

ಮುಂದಿನ ಸುದ್ದಿ

15 ಕ್ಷೇತ್ರಗಳ ಪೈಕಿ ಒಂದೇ ಒಂದು ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಗೆಲ್ಲುವುದಿಲ್ಲ- ಡಿಸಿಎಂ ಅಶ್ವಥ್ ನಾರಾಯಣ ವ್ಯಂಗ್ಯ