Webdunia - Bharat's app for daily news and videos

Install App

ಬೆಂಕಿಯಂತಿರುವ ಸಿದ್ದರಾಮಯ್ಯರನ್ನು ಮುಟ್ಟಿದ್ರೆ ಭಸ್ಮ ಆಗ್ತಾರೆ: ಜಮೀರ್ ಅಹ್ಮದ್

Sampriya
ಬುಧವಾರ, 26 ಫೆಬ್ರವರಿ 2025 (17:02 IST)
Photo Courtesy X
ಬಳ್ಳಾರಿ: ಸಿಎಂ ಸಿದ್ದರಾಮಯ್ಯ ಬೆಂಕಿ ಇದ್ದ ಹಾಗೇ ಅವರನ್ನು ಮುಟ್ಟಿದ್ರೆ ಭಸ್ಮ ಆಗ್ತಾರೆ ಎಂದು ವಿರೋಧಿಗಳಿಗೆ ಸಚಿವ ಜಮೀರ್ ಅಹ್ಮದ್ ಖಾನ್ ಕೌಂಟರ್‌ ನೀಡಿದರು.

ಪವರ್‌ ಫೈಟ್‌ ಬಗ್ಗೆ ಬಳ್ಳಾರಿಯಲ್ಲಿ ಮಾಧ್ಯಮಗಳೊಂದಿಗೆ ಅವರು, ಸಿದ್ದರಾಮಯ್ಯ ಅವರು ಬೆಂಕಿಯಾ ಹಾಗೇ, ಯಾರಿಂದಲೂ ಮುಟ್ಟೋಕಾಗಲ್ಲ, ಮುಟ್ಟಿದ್ರೆ ಭಸ್ಮ ಆಗ್ತಾರೆ. ಸಿಎಂ, ಕೆಪಿಸಿಸಿ ಸ್ಥಾನ ಖಾಲಿ ಇಲ್ಲ. ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಇದ್ದಾರೆ. ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಇದ್ದಾರೆ. ಆ ಸ್ಥಾನಗಳು ಖಾಲಿಯಾದ್ರೆ ಚರ್ಚೆ ಮಾಡ್ಮೋದೂ ಎಂದರು.

ಸಿಎಂ ಸಿದ್ದರಾಮಯ್ಯ ಅವರ ಖುರ್ಚಿ ಮುಟ್ಟಲು ಯಾರಿಂದಲೂ ಸಾಧ್ಯವಿಲ್ಲ. ಅದೊಂಥರ ಬೆಂಕಿ ಅದು, ಬೆಂಕಿ ಮುಟ್ಟಿದ್ರೆ ಸುಟ್ಟೋಗ್ತಾರೆ. ಸಿದ್ದರಾಮಯ್ಯ ಬೆಂಕಿ ಇದ್ದಂತೆ, ನಾವು ಟಗರು ಅಂತೀವಿ. ಆ ಬೆಂಕಿ ಮುಟ್ಟೋಕೆ ಸಾಧ್ಯವಿಲ್ಲ, ಮುಟ್ಟಿದ್ರೆ ಭಸ್ಮ ಆಗ್ತಾರೆ ಎಂದು ಎದುರಾಳಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ನಮ್ಮ ಪಕ್ಷ ಹೈಕಮಾಂಡ್‌ ನಿರ್ಧಾರಕ್ಕೆ ಬದ್ಧ. ಹೈಕಮಾಂಡ್ ಬದಲಾವಣೆ ಮಾಡಬೇಕು ಅಂತ ನಿರ್ಧಾರ ಮಾಡಿದ್ರೆ ನಾವು ಅಭಿಪ್ರಾಯ ತಿಳಿಸಬಹುದು. ಆದ್ರೆ ಹೈಕಮಾಂಡ್‌ ಯಾವುದೇ ನಿರ್ಧಾರಕ್ಕೆ ಇನ್ನೂ ಬಂದಿಲ್ಲ. ನಮ್ಮ ಪಕ್ಷದವರು ಯಾರೂ ಕೂಡ ಸಿದ್ದರಾಮಯ್ಯ ಬದಲಾವಣೆ ಮಾಡಲಿ ಅಂತಲೂ ಹೇಳಿಲ್ಲಾ. ಎಲ್ಲಾ ಸಮಾಜಕ್ಕೂ ಸಿಎಂ ಆಗಬೇಕು ಅಂತ ಆಸೆ ಇರುತ್ತೆ. ದಲಿತ, ಅಲ್ಪಸಂಖ್ಯಾತ, ಎಸ್ಸಿ, ಎಸ್ಟಿ, ಲಿಂಗಾಯತ ಸಮುದಾಯ ಎಲ್ಲರೂ ಸಿಎಂ ಆಗಬೇಕು ಅಂತಾರೆ. ತೀರ್ಮಾನ ಹೈ ಕಮಾಂಡ್‌ಗೆ ಬಿಟ್ಟಿದ್ದು ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census: ಜಾತಿಗಣತಿ ಮಾಡಲು ಯಾಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ, ಇಲ್ಲಿದೆ ಸೀಕ್ರೆಟ್

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

Karnataka Weather: ಎರಡು ದಿನಗಳಿಗೆ ಮಳೆ ಜೋರು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

ಮುಂದಿನ ಸುದ್ದಿ
Show comments