Publish Date: Wed, 20 Nov 2019 (11:29 IST)
Updated Date: Wed, 20 Nov 2019 (11:30 IST)
ಮೈಸೂರು : ಸಿದ್ದರಾಮಯ್ಯಗೆ ಸಚಿವ ಶ್ರೀರಾಮುಲು ಸವಾಲು ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಶ್ರೀರಾಮುಲು ಬಗ್ಗೆ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಚುನಾವಣೆಯ ವೇಳೆ ಬಾದಾಮಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಗೆಲುವು ಸಾಧಿಸುವ ವಿಚಾರಕ್ಕೆ ಶ್ರೀರಾಮುಲು ಸಿದ್ದರಾಮಯ್ಯಗೆ ರಾಜೀನಾಮೆ ನೀಡಿ ಮತ್ತೆ ಚುನಾವಣೆ ಎದುರಿಸುವಂತೆ ಸವಾಲು ಹಾಕಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಶ್ರೀರಾಮುಲು ವೆರಿ ವೆರಿ ಪಾಪ್ಯುಲರ್ ಲೀಡರ್. ನಾನು ಅಷ್ಟು ಪಾಪ್ಯುಲರ್ ಅಲ್ಲ. ಅವರು ಯಾರ ಮೇಲಾದರೂ ತೊಡೆ ತಟ್ಟುತ್ತಾರೆ. ನಮಗೆ ಶ್ರೀರಾಮುಲು ರೀತಿ ತೊಡೆ ತಟ್ಟಲು ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.