Select Your Language

Notifications

webdunia
webdunia
webdunia
webdunia

ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ

ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ
ಬೆಂಗಳೂರು , ಬುಧವಾರ, 20 ಮೇ 2020 (19:33 IST)
ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದು, ಈ ವೇಳೆ ಪೊಲೀಸರ ಮೇಲೆ ಸಿದ್ದರಾಮಯ್ಯ ಗರಂ ಆದರು.

ಬೆಂಗಳೂರಿನ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಮುಖಂಡರು, ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರ ಲಾಕ್ ಡೌನ್ ವೇಳೆ ಕೈಗೊಂಡ ಹಲವು ಕ್ರಮಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರು.

ಪ್ರತಿಭಟನೆಗೆ ಅವಕಾಶ ನೀಡದ ಪೊಲೀಸರ ವಿರುದ್ಧ ಸಿದ್ದರಾಮಯ್ಯ ಗರಂ ಆದರು. ಭದ್ರತಾ ದೃಷ್ಟಿಯಿಂದ ಪ್ರತಿಭಟನೆಗೆ ಪೊಲೀಸರು ಅವಕಾಶ ನೀಡಿರಲಿಲ್ಲ.

ವಿಧಾನಸೌಧದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸಲೂ ಅವಕಾಶ ಇಲ್ಲ. ಪ್ರತಿಭಟನೆಗೂ ಅವಕಾಶ ಇಲ್ಲ ಎಂದರೆ ಹೇಗೆ? ಎಂದು ಆಕ್ರೋಶಗೊಂಡರು.

ಇದೇ ವೇಳೆ, ಕೇಂದ್ರ ಸರಕಾರ ಘೋಷಣೆ ಮಾಡಿರುವ 20 ಲಕ್ಷ ಕೋಟಿ ಪ್ಯಾಕೇಜ್ ಬೋಗಸ್ ಆಗಿದೆ. ಜನರಿಗೆ ಪ್ಯಾಕೇಜ್ ನ ಒಂದು ರೂಪಾಯಿ ತಲುಪಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಕಳ್ಳನ ಬಂಧನ ಮಾಡಿದ್ದಕ್ಕೆ ಇನ್ಸಪೆಕ್ಟರ್, ಪೊಲೀಸರಿಗೆ ಕ್ವಾರಂಟೈನ್