ನಾನು ಆಸ್ತಿ, ಚಿನ್ನ ಬಯಸಲಿಲ್ಲ: ಸೈಟ್ ಮರಳಿಸಿದ ಸಿದ್ದರಾಮಯ್ಯ ಪತ್ನಿ ಭಾವುಕ ಪತ್ರ

Krishnaveni K
ಮಂಗಳವಾರ, 1 ಅಕ್ಟೋಬರ್ 2024 (09:24 IST)
Photo Credit: X
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸಿಲುಕಿದ ಬೆನ್ನಲ್ಲೇ ಅವರ ಪತ್ನಿ ಪಾರ್ವತಿ ಈಗ ತಮಗೆ ನೀಡಲಾಗಿದ್ದ 14 ಸೈಟ್ ಗಳನ್ನೂ ಹಿಂದಿರುಗಿಸಿದ್ದಾರೆ. ಈ ಬಗ್ಗೆ ಅವರು ಬರೆದ ಭಾವುಕ ಪತ್ರವನ್ನು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಪತ್ನಿ ಹೆಸರಿನಲ್ಲಿ ಮುಡಾ ಸೈಟು ಅಕ್ರಮವಾಗಿ ಹಂಚಿಕೆಯಾಗಿದೆ ಎಂದು ಆರೋಪವಾಗಿದೆ. ಈ ಬಗ್ಗೆ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ತನಿಖೆ ಆರಂಭವಾಗಲಿದೆ. ಇದರ ನಡುವೆ ವಿಪಕ್ಷಗಳು ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಡ ಹೇರುತ್ತಿದ್ದಾರೆ.

ಇದೆಲ್ಲಾ ರದ್ದಾಂತಗಳ ಬಳಿಕ ಪಾರ್ವತಿ ತಮ್ಮ ಹೆಸರಿನಲ್ಲಿದ್ದ ಎಲ್ಲಾ 14 ಸೈಟುಗಳನ್ನು ಹಿಂಪಡೆದುಕೊಳ್ಳುವಂತೆ ಮುಡಾಗೆ ಪತ್ರ ಬರೆದಿದ್ದಾರೆ. ನಾನು ಯಾವತ್ತೂ ಸೈಟು, ಚಿನ್ನಕ್ಕಾಗಿ ಆಸೆಪಟ್ಟವಳಲ್ಲ. ನನ್ನ ಪತಿಗಿಂತ ಸೈಟು ದೊಡ್ಡದಲ್ಲ ಎಂದು ಪಾರ್ವತಿ ಪತ್ರದಲ್ಲಿ ಬರೆದಿದ್ದಾರೆ.

ನನ್ನ ಪತಿ ರಾಜ್ಯದ ರಾಜಕಾರಣಿಯಾಗಿ 40 ವರ್ಷಗಳಿಂದ ಒಂದೇ ಒಂದು ಕಳಂಕವಿಲ್ಲದೇ ಬದುಕುತ್ತಿದ್ದಾರೆ. ಅವರಿಗೆ ಮುಜುಗರವಾಗಬಾರದು ಎಂದು ಸಾರ್ವಜನಿಕ ಜೀವನದಿಂದ ದೂರವಿದ್ದವಳು ನಾನು. ಅವರ ರಾಜಕೀಯ ಜೀವನಕ್ಕೆ ನನ್ನಿಂದ ಸಣ್ಣ ಕಳಂಕವೂ ಬರಬಾರದು ಎಂದು ಬದುಕಿದವಳು.

ಮುಡಾ ಸೈಟು ವಿಚಾರ ನನಗೆ ನೋವುಂಟು ಮಾಡಿದೆ. ನನ್ನ ಸಹೋದರ ಅರಿಶಿನ ಕುಂಕುಮದ ಬಾಬ್ತು ನೀಡಿದ ಸೈಟುಗಳವು. ಇದರಿಂದ ಅನ್ಯಾಯವಾಗಿ ನನ್ನ ಪತಿ ಆರೋಪಗಳನ್ನು ಎದುರಿಸಬೇಕಾಗುತ್ತಿದೆ. ಈ ಹಿನ್ನಲೆಯಲ್ಲಿ ನನಗೆ ನೀಡಿದ 14 ಸೈಟುಗಳನ್ನು ವಾಪಸ್ ಮಾಡಲು ನಿರ್ಧರಿಸಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ದಿಢೀರನೇ ತುಮಕೂರು ಪ್ರವಾಸವನ್ನು ರದ್ದು ಮಾಡಿದ ಸಿಎಂ, ಇದೇ ಕಾರಣ

ಮುಂದಿನ ಸುದ್ದಿ
Show comments