ರಾಜ್ಯದ ಪೊಲೀಸ್ ಇಲಾಖೆಯ ಅತ್ಯುನ್ನತ ಹುದ್ದೆಯಾದ ಪೊಲೀಸ್ ಮಹಾ ನಿರ್ದೇಶಕ ಹುದ್ದೆಯ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಫೆ.27ರಂದು ಸಭೆ ನಡೆಯಲಿದೆ.
ಸಭೆಯಲ್ಲಿ ಕಾನೂನು ಸಚಿವ ಟಿ.ಬಿ.ಜಯಚಂದ್ರ, ಗೃಹ ಸಚಿವ ಕೆ.ಜೆ.ಜಾರ್ಜ್, ಪೊಲೀಸ್ ಮಹಾ ನಿರ್ದೇಶಕ(ಡಿಜಿ&ಐಜಿಪಿ) ಲಾಲ್ ರುಕುಮಾ ಪಚಾವೊ ಸೇರಿದಂತೆ ಇನ್ನಿತರೆ ಗಣ್ಯರು ಭಾಗವಹಿಸಲಿದ್ದು, ಸಿಎಂ ನೇತೃತ್ವದಲ್ಲಿ ವಿಸ್ತೃತವಾಗಿ ಚರ್ಚಿಸಲಿದ್ದಾರೆ ಎನ್ನಲಾಗಿದ್ದು, ಮುಖ್ಯಮಂತ್ರಿಗಳ ನಿವಾಸ ಕೃಷ್ಣಾದಲ್ಲಿ ಸಭೆ ನಡೆಯಲಿದೆ.
ಇನ್ನು ಪ್ರಸ್ತುತ ಈ ಪದವಿ ಅಲಂಕರಿಸಲು ಹಲವು ವರ್ಷಗಳಿಂದ ಪೊಲೀಸ್ ಆಡಳಿತದಲ್ಲಿ ಗಮನಾರ್ಹ ಸೇವೆ ಸಲ್ಲಿಸಿರುವ ಹಿರಿಯ ಅಧಿಕಾರಿಗಳಾದ ಆರ್.ಕೆ.ದತ್ತಾ ಹಾಗೂ ಓಂ ಪ್ರಕಾಶ್ ಅವರ ಹೆಸರುಗಳು ರೇಸ್ನಲ್ಲಿ ಕೇಳಿ ಬರುತ್ತಿವೆ.
ಪ್ರಸ್ತುತ ಈ ಹುದ್ದೆಯನ್ನು ನಿರ್ವಹಿಸುತ್ತಿರುವ ಪಚಾವೊ ಫೆ.28ರಂದು ಮುಕ್ತಾಯವಾಗಲಿದ್ದು, ಈ ಹಿನ್ನೆಲೆಯಲ್ಲಿ ಫೆ.27ರಂದೇ ನೂತನ ಡಿಜಿ&ಐಜಿಪಿ ನೇಮಕಕ್ಕೆ ಸರ್ಕಾರ ಮುಂದಾಗಿದೆ.