ಸಿದ್ದರಾಮಯ್ಯ ಹೆಣ ಬಂದರೂ ಬಿಜೆಪಿಗೆ ಸೇರಿಸಲ್ಲ

Webdunia
ಗುರುವಾರ, 14 ಸೆಪ್ಟಂಬರ್ 2023 (16:20 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಲ. ಅವರ ಹೆಣ ಬಂದರೂ ಕೂಡ ಬಿಜೆಪಿಗೆ ಸೇರಿಸಿಕೊಳ್ಳಲ್ಲ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಖಾರವಾಗಿ ಪ್ರತಿಕ್ರಿಯಿಸಿದರು. ವಿಜಯಪುರದಲ್ಲಿ ಮಾತನಾಡಿದ ಅವರು, ಬಿಜೆಪಿಗೆ ನನ್ನ ಹೆಣ ಕೂಡ ಹೋಗಲ್ಲ ಎಂದು ಸಿದ್ದರಾಮಯ್ಯ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯನವರು ಬಿಜೆಪಿಗೆ ಜೀವಂತವಾಗಿ ಬಂದರೂ ಕರೆದುಕೊಳ್ಳುವುದಿಲ್ಲ. ಸಿದ್ದರಾಮಯ್ಯ ಅಂಗಲಾಚಿ ಬೇಡಿಕೊಂಡರೂ ನಾವು ಬಿಜೆಪಿಗೆ ಸೇರಿಸಿಕೊಳ್ಳುವುದಿಲ್ಲ. ನಮಗೆ ಸಿದ್ದರಾಮಯ್ಯನವರ ಅವಶ್ಯಕತೆ ಇಲ್ಲ. ಇನ್ನು ಅವರ ಹೆಣದ ಮಾತು ದೂರ ಉಳಿಯಿತು ಎಂದರು. ಬಿಜೆಪಿ ವಿಷದ ಹಾವು ಎಂದ ಉದಯ ನಿಧಿ ಸ್ಟಾಲಿನ್ ಹೇಳಿಕೆಗೆ ಪ್ರತಿಕ್ರಿಯಿಸಿ, ಕರುಣಾನಿಧಿ ತಳಿಯೆ ವಿಷದ ಹಾವು. ಅದು ಕೆಟ್ಟ ತಳಿ ಇದೆ. ಈ ತಳಿ ದೇಶಕ್ಕೆ ನಿಷ್ಠೆಯಿಲ್ಲ. ಧರ್ಮಕ್ಕೂ ನಿಷ್ಠೆಯಿಲ್ಲ. ಒಂದು ಕಾಲದಲ್ಲಿ ಎಲ್‌ಟಿಟಿಇಗೆ ಬೆಂಬಲ ನೀಡಿದವರು. ದೇಶ ವಿರೋಧಿ ಚಟುವಟಿಕೆಗಳಿಗೆ ಬೆಂಬಲಿಸಿದವರು. ಅವರಿಂದ ಇನ್ನೇನೂ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಲ್ಲೂ ಪಶ್ಚಿಮ ಬಂಗಾಲದ ಮಾದರಿ ಫಲಿತಾಂಶ: ವಿಜಯೇಂದ್ರ ವಿಶ್ವಾಸ

ಧರ್ಮಸ್ಥಳ ಪ್ರಕರಣ: ಮರು ತನಿಖೆಯ 7,005 ಪುಟಗಳ ಅಂತಿಮ ವರದಿ

ಪುರಿ ಜಗನ್ನಾಥ ರಥಯಾತ್ರೆಗೆ ಯಾಕಿಷ್ಟು ಜನ ಸೇರ್ತಾರೆ: ಶ್ರೀಕೃಷ್ಣನ ಮಾಯೆಯ ರಹಸ್ಯವೇನು ಇಲ್ಲಿದೆ ಮಾಹಿತಿ

ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ, ನಿರಾಕರಿಸಿದ್ದಕ್ಕೆ ವಿವಾಹಿತ ಮಹಿಳೆಯ ಚಾರಿತ್ರ್ಯಕ್ಕೆ ಮಸಿ, ದೂರು

ಲಿಫ್ಟ್‌ನೊಳಗೆ ಹೊಡೆದಾಡಿಕೊಂಡ ಅಪಾರ್ಟ್‌ಮೆಂಟ್‌ ನಿವಾಸಿಗಳು, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments