Publish Date: Wed, 30 Mar 2022 (08:02 IST)
Updated Date: Wed, 30 Mar 2022 (08:04 IST)
ತುಮಕೂರು : ಸಿದ್ದರಾಮಯ್ಯ ಅವರು ಇಲ್ಲ ಅಂದರೆ ಕಾಂಗ್ರೆಸ್ ಪಕ್ಷ ಇರಲ್ಲ. ಕಾಂಗ್ರೆಸ್ ಪಕ್ಷಕ್ಕೆ ಸಿದ್ದರಾಮಯ್ಯ ಅನಿವಾರ್ಯ ಎಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ಹೇಳಿದರು.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಸಾಮೂಹಿಕ ನಾಯಕತ್ವ ಇದೆ. ಅದರಂತೆ ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯ ಕೂಡ ಪ್ರಮುಖ ನಾಯಕರು ಅಂತ ರಾಜಣ್ಣ ಅವರು, ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದಾರೆ.
ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯ ಅನಿವಾರ್ಯತೆ ಹೆಚ್ಚಿದೆ. ರಾಜ್ಯದಲ್ಲಿ ಯಡಿಯೂರಪ್ಪ ಇಲ್ಲ ಎಂದರೆ ಬಿಜೆಪಿ ಇರಲ್ಲ.
ಮಾಜಿ ಪ್ರಧಾನಿ ದೇವೇಗೌಡರವರು ಇಲ್ಲ ಎಂದರೆ ಜೆಡಿಎಸ್ ಇರಲ್ಲ. ಅದರಂತೆ ರಾಜ್ಯದಲ್ಲಿ ಸಿದ್ದರಾಮಯ್ಯ ಇಲ್ಲ ಎಂದರೆ ಕಾಂಗ್ರೆಸ್ ಇರಲ್ಲ ಎಂದು ತಿಳಿಸಿದ್ದಾರೆ.