Webdunia - Bharat's app for daily news and videos

Install App

ಮೈಸೂರು ಮೇಯರ್ ಸ್ಥಾನಕ್ಕಾಗಿ ಕೊನೆಗೂ ಒಪ್ಪಂದ ಮಾಡಿಕೊಂಡ ಜೆಡಿಎಸ್-ಕಾಂಗ್ರೆಸ್

Webdunia
ಶನಿವಾರ, 17 ನವೆಂಬರ್ 2018 (08:50 IST)
ಮೈಸೂರು: ಮೈಸೂರು ಮೇಯರ್ ಸ್ಥಾನ ವಿಚಾರವಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ತಿಕ್ಕಾಟ ನಡೆದಿತ್ತು. ಆದರೆ ಇದು ದೋಸ್ತಿ ಸರ್ಕಾರದ ಮೇಲೆ ಪರಿಣಾಮ ಬೀರುವ ಮೊದಲೇ ಎರಡೂ ಪಕ್ಷಗಳು ಒಮ್ಮತಕ್ಕೆ ಬಂದಿವೆ.

ಬೆಂಗಳೂರಿನಲ್ಲಿ ಕಾಂಗ್ರೆಸ್ ಗೆ ಮೇಯರ್ ಸ್ಥಾನ ಬಿಟ್ಟುಕೊಟ್ಟಿದ್ದೇವೆ. ಹಾಗಾಗಿ ಮೈಸೂರಿನಲ್ಲಿ ಜೆಡಿಎಸ್ ಗೆ ಮೇಯರ್ ಸ್ಥಾನ ಬಿಟ್ಟು ಕೊಡಲಿ ಎಂದು ಸಾ ರಾ ಮಹೇಶ್ ಆಗ್ರಹಿಸಿದ್ದರು.

ಇದಕ್ಕೆ ಪ್ರತ್ಯುತ್ತರ ನೀಡಿದ್ದ ಸಿದ್ದರಾಮಯ್ಯ ‘ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಿಟಿ ದೇವೇಗೌಡರಿದ್ದಾರೆ. ಸಂಪುಟದಲ್ಲಿ ಸಾ ರಾ ಮಹೇಶ್ ಸಚಿವರಾಗಿದ್ದಾರೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೂ ಧ್ವನಿಯ ಅಗತ್ಯವಿದೆ. ಈ ಉದ್ದೇಶಕ್ಕಾಗಿ ಮೈಸೂರು ನಗರ ಪಾಲಿಕೆ ಮೇಯರ್ ಸ್ಥಾನವನ್ನು ನಮ್ಮ ಪಕ್ಷಕ್ಕೆ ನೀಡುವಂತೆ ಕೇಳಿದ್ದೇವೆ, ಇದು ನ್ಯಾಯಸಮ್ಮತವಾದ ಬೇಡಿಕೆಯೂ ಹೌದು’ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದರು.

ಇದೀಗ ಮಂಗಳೂರಿನಲ್ಲಿ ಸಭೆ ನಡೆಸಿದ್ದ ಜೆಡಿಎಸ್ ಸದಸ್ಯರು ಕಾಂಗ್ರೆಸ್ ಗೆ ಮೇಯರ್ ಸ್ಥಾನ ಬಿಟ್ಟುಕೊಡಲು ತೀರ್ಮಾನಿಸಿದ್ದಾರೆ. ಆದರೆ ಇದು ಪೂರ್ಣಾವಧಿಗೆ ಅಲ್ಲ. ಒಂದು ವರ್ಷ ಕಾಂಗ್ರೆಸ್ ಇನ್ನೊಂದು ವರ್ಷ ಜೆಡಿಎಸ್ ನಾಯಕರು ಮೇಯರ್ ಆಗಲಿದ್ದಾರೆ. ಈ ಮೂಲಕ ಎರಡೂ ಪಕ್ಷಗಳು ಮೈತ್ರಿಗೆ ಭಂಗ ಬಾರದಂತೆ ಒಮ್ಮತಕ್ಕೆ ಬಂದಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments