Select Your Language

Notifications

webdunia
webdunia
webdunia
webdunia

25 ವರ್ಷಗಳ ಹಿಂದೆ ಮಾಡಿದ ತಪ್ಪು ಮಾಜಿ ಸಿಎಂ ಸಿದ್ದರಾಮಯ್ಯಗೆ ಈಗ ಎದುರು ಬಂತು!

25 ವರ್ಷಗಳ ಹಿಂದೆ ಮಾಡಿದ ತಪ್ಪು ಮಾಜಿ ಸಿಎಂ ಸಿದ್ದರಾಮಯ್ಯಗೆ ಈಗ ಎದುರು ಬಂತು!
ಮೈಸೂರು , ಸೋಮವಾರ, 18 ಜೂನ್ 2018 (09:27 IST)
ಮೈಸೂರು: ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ನಡೆಸಿದ್ದಾರೆಂಬ 25 ವರ್ಷಗಳ ಹಿಂದಿನ ಪ್ರಕರಣವೊಂದು ಮಾಜಿ ಸಿಎಂ ಸಿದ್ದರಾಮಯ್ಯಗೆ ಕಂಟಕವಾಗಿ ಪರಿಣಮಿಸಿದೆ.

ಈಗ ವಿಜಯನಗರ 2 ನೇ ಹಂತದಲ್ಲಿರುವ 30 ಗುಂಟೆ ಜಮೀನನ್ನು ತಮ್ಮ ಬೆಂಬಲಿಗರಿಗೆ ಖಾತೆ ಮಾಡಿಕೊಡುವ ಮೂಲಕ ಜನರಿಗೆ ಸೇರಬೇಕಾದ ಭೂಮಿಯನ್ನು ಅಕ್ರಮವಾಗಿ ಡಿನೋಟಿ ಫೈ ಮಾಡಿ ತಮ್ಮ ಜತೆಗಾರರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಆರೋಪ ಕೇಳಿಬಂದಿದೆ.

ಇದೀಗ ಮೈಸೂರಿನ ವಕೀಲರೊಬ್ಬರು ಈ ಪ್ರಕರಣದ ಬಗ್ಗೆ ಕೋರ್ಟ್ ಮೆಟ್ಟಿಲೇರಿದ್ದಾರೆ. ಆ ಸಂದರ್ಭದಲ್ಲಿ ಸಿದ್ದರಾಮಯ್ಯ ಡಿಸಿಎಂ ಆಗಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಒಟ್ಟು 9 ಕ್ರಿಮಿನಲ್  ಪ್ರಕರಣಗಳು ಸಿದ್ದರಾಮಯ್ಯ ಮೇಲೆ ದಾಖಲಿಸಲು ಮೈಸೂರಿನ ಕೋರ್ಟ್ ಸೂಚಿಸಿದೆ. ಹೀಗಾಗಿ ಇದೀಗ ಭೂ ಅಕ್ರಮದ ಕಂಟಕ ಸಿದ್ದರಾಮಯ್ಯಗೆ ಉರುಳಾಗುವ ಸಾಧ್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಬಿನ್ನಿಪೇಟೆ ಉಪಚುನಾವಣೆ: ಕಾಂಗ್ರೆಸ್ –ಜೆಡಿಎಸ್ ಮಾರಾಮಾರಿ